ಬಣ್ಣ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೇ ನಮ್ಮ ದೇಶದ ಶತ್ರುಗಳನ್ನು ಖಂಡಿಸಬೇಕು ಎಂದು ಹೇಳಿರುವ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ಚೌಧರಿ, ‘ಆರೋಪಿ ದೇವೇಂದ್ರ ಸಿಂಗ್ ಬದಲು ದೇವೇಂದ್ರ ಖಾನ್ ಆಗಿದ್ದರೆ, ಆರ್ಎಸ್ಎಸ್ ಟ್ರೋಲ್ ತಂಡವು ಕರ್ಕಶವಾದ ಗದ್ದಲವೆಬ್ಬಿಸುತ್ತಿತ್ತು. ದೇಶದ ಶತ್ರುಗಳನ್ನು ಅವರ ವರ್ಣ, ನಂಬಿಕೆ ಮತ್ತು ಧರ್ಮಗಳನ್ನು ಲೆಕ್ಕಿಸದೇ ನಾವು ಖಂಡಿಸಬೇಕು’ ಎಂದು ಹೇಳಿದ್ದಾರೆ.