ಪ್ರಕರಣಕ್ಕೆ ಸಂಬಂಧಿಸಿದಂತೆಪ್ರಧಾನಮಂತ್ರಿನರೇಂದ್ರ ಮೋದಿ,‘ಆಕ್ರೋಶ ಮೇರೆ ಮೀರಿದೆ ಮತ್ತು ನಿಮ್ಮ ರಕ್ತ ಕುದಿಯುತ್ತಿದೆ ಎಂಬುದು ನನಗೆ ಗೊತ್ತು. ತಕ್ಕ ಪಾಠ ಕಲಿಸಬೇಕು ಎಂಬ ನಿರೀಕ್ಷೆ ಮತ್ತು ಭಾವನೆ ಈ ಕ್ಷಣದಲ್ಲಿ ಎಲ್ಲರಲ್ಲಿಯೂ ಇರುವುದು ಸಹಜವೇ ಆಗಿದೆ. ಇಂತಹ ದಾಳಿಗೆ ದೇಶವು ಸರಿಯಾದ ಉತ್ತರವನ್ನೇ ನೀಡಲಿದೆ. ಭಾರತವನ್ನು ಬೆದರಿಸಲು ಸಾಧ್ಯವಿಲ್ಲ. ಭದ್ರತಾ ಪಡೆಗಳು ಏನು ಮಾಡಬೇಕೋ ಅದಕ್ಕೆ ಬೇಕಾದ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ನಮ್ಮ ಧೀರ ಯೋಧರ ಮೇಲೆ ಪರಿಪೂರ್ಣ ವಿಶ್ವಾಸ ಇದೆ’ ಎಂದಿದ್ದರು.