ದಾಳಿಯನ್ನು ಖಂಡಿಸಿದ್ದ ಮೋದಿ ಅವರು, ‘ಸಿಆರ್ಪಿಎಫ್ ಸಿಬ್ಬಂದಿಯ ಮೇಲಿನ ದಾಳಿಯು ತುಚ್ಛವಾದದ್ದದು.ಹಠಾತ್ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ‘ಧೀರ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹುತಾತ್ಮ ಯೋಧರ ಕುಟುಂಬಗಳ ಜೊತೆ ಇಡೀ ದೇಶದ ಜನ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದ್ದಾರೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ’ ಎಂದೂ ಟ್ವೀಟ್ ಮಾಡಿದ್ದರು.