ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂತ್ರಿಕ ತೊಂದರೆ: ಬೆಂಗಳೂರಿಗೆ ಮರಳಿದ ವಿಮಾನ

ಶ್ರೀಕೃಷ್ಣ ಜನ್ಮಾಷ್ಟಮಿ ಚಿತ್ರಗಳು
Last Updated 2 ಸೆಪ್ಟೆಂಬರ್ 2018, 19:37 IST
ಅಕ್ಷರ ಗಾತ್ರ

ನವದೆಹಲಿ: ಎಂಜಿನ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದ ಕಾರಣ ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಗೋ ಏರ್‌ ಸಂಸ್ಥೆಯ ವಿಮಾನ (ಏರ್‌ಬಸ್‌ ಎ 320)ಶನಿವಾರ ಬೆಂಗಳೂರಿಗೆ ಮರಳಿದೆ.

‘ದಾರಿ ಮಧ್ಯೆ ವಿಮಾನದ ಎಂಜಿನ್‌ನಲ್ಲಿ ತೊಂದರೆ ಕಾಣಿಸಿಕೊಂಡಿತಲ್ಲದೇ, ಈ ಕುರಿತಂತೆ ಸಂಬಂಧಿಸಿದಂತೆ ಸಿಬ್ಬಂದಿಯಿಂದ ಪೈಲಟ್‌ಗೆ ತುರ್ತು ಸಂದೇಶ ರವಾನೆಯಾಯಿತು. ತಕ್ಷಣ ವಿಮಾನವನ್ನು ಬೆಂಗಳೂರು ನಿಲ್ದಾಣದಲ್ಲಿ ಇಳಿಸಲಾಯಿತು’ ಎಂದು ಗೋ ಏರ್‌ ವಕ್ತಾರರು ತಿಳಿಸಿದ್ದಾರೆ.

‘ವಿಮಾನದಲ್ಲಿದ್ದ ಎಲ್ಲ 169 ಪ್ರಯಾಣಿಕರಿಗೆ ಬೇರೆ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಯಿತು’ ಎಂದೂ ತಿಳಿಸಿದರು.

ಎಂಜಿನ್‌ನಲ್ಲಿ ತಾಂತ್ರಿಕ ತೊಂದರೆ ಕಾರಣ ಇತ್ತೀಚೆಗೆ ಗೋ ಏರ್‌ ಸಂಸ್ಥೆಗೆ ಸೇರಿದ ಎರಡು ವಿಮಾನಗಳು ತುರ್ತು ಭೂಸ್ಪರ್ಶ ಮಾಡಿದ್ದವು ಎಂದು ಡಿಜಿಸಿಎ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT