<p><strong>ಪುಣೆ: </strong>'ಗೋಲ್ಡ್ ಮ್ಯಾನ್' ಎಂದೇ ಖ್ಯಾತಿಯಾಗಿದ್ದ ಮಹಾರಾಷ್ಟ್ರದ ಉದ್ಯಮಿ ಸಾಮ್ರಾಟ್ ಮೊಜೆ ಹೃದಯಾಘಾತದಿಂದ ಮೃತಪಟ್ಟಿರುವುದುತಡವಾಗಿ ವರದಿಯಾಗಿದೆ.</p>.<p>ಸಾಮ್ರಾಟ್ ಮೊಜೆ ಅವರಿಗೆ 39 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.</p>.<p>ಮೊಜೆ ಅವರಿಗೆ ಮಂಗಳವಾರ ಹೃದಯಾಘಾತವಾಗಿತ್ತು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅವರ ಅಂತ್ಯಕ್ರಿಯೆಯನ್ನು ಪುಣೆಯ ಯರವಾಡದ ಬಳಿ ಕೆಲವೇ ಜನರ ಸಮ್ಮುಖದಲ್ಲಿ ನೆರವೇರಿಸಲಾಯಿತು ಎಂದು ಮೊಜೆ ಕುಟುಂಬಮೂಲಗಳು ತಿಳಿಸಿವೆ.</p>.<p>ಸಾಮ್ರಾಟ್ಮೊಜೆ ಮೈಮೇಲೆ ಸದಾ 8 ರಿಂದ 10 ಕೆ.ಜಿ ಬಂಗಾರ ಹಾಕಿಕೊಂಡು ಒಡಾಡುತ್ತಿದ್ದರು. ಅವರನ್ನು ಸ್ಥಳೀಯರುಗೋಲ್ಡ್ ಮ್ಯಾನ್ ಎಂದು ಕರೆಯುತ್ತಿದ್ದರು.</p>.<p>ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಚಿನ್ನ ಹಾಕಿಕೊಂಡು ಒಡಾಡುತ್ತಿದ್ದ ಮೂವರು ಉದ್ಯಮಿಗಳು ಮೃತಪಟ್ಟಿದ್ದಾರೆ. 2011ರಲ್ಲಿ ಎಂಎನ್ಎಸ್ ಶಾಸಕ ರಮೇಶ್ ವಂಜಾಲೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರು ಕೂಡ ಕೆ.ಜಿಗಟ್ಟಲೇ ಚಿನ್ನ ಹಾಕಿಕೊಳ್ಳುತ್ತಿದ್ದರು.</p>.<p>ಚಿನ್ನದ ಅಂಗಿಯನ್ನು ಹಾಕಿಕೊಳ್ಳುತ್ತಿದ್ದ ಉದ್ಯಮಿ ದತ್ತಾತ್ರೇಯ ಫುಂಗೆಯನ್ನು 12 ಜನರ ಗುಂಪು ಹಲ್ಲೆ ಮಾಡಿ ಹತ್ಯೆ ಮಾಡಿತ್ತು. ಈ ಘಟನೆ 2016ರಲ್ಲಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ: </strong>'ಗೋಲ್ಡ್ ಮ್ಯಾನ್' ಎಂದೇ ಖ್ಯಾತಿಯಾಗಿದ್ದ ಮಹಾರಾಷ್ಟ್ರದ ಉದ್ಯಮಿ ಸಾಮ್ರಾಟ್ ಮೊಜೆ ಹೃದಯಾಘಾತದಿಂದ ಮೃತಪಟ್ಟಿರುವುದುತಡವಾಗಿ ವರದಿಯಾಗಿದೆ.</p>.<p>ಸಾಮ್ರಾಟ್ ಮೊಜೆ ಅವರಿಗೆ 39 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.</p>.<p>ಮೊಜೆ ಅವರಿಗೆ ಮಂಗಳವಾರ ಹೃದಯಾಘಾತವಾಗಿತ್ತು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅವರ ಅಂತ್ಯಕ್ರಿಯೆಯನ್ನು ಪುಣೆಯ ಯರವಾಡದ ಬಳಿ ಕೆಲವೇ ಜನರ ಸಮ್ಮುಖದಲ್ಲಿ ನೆರವೇರಿಸಲಾಯಿತು ಎಂದು ಮೊಜೆ ಕುಟುಂಬಮೂಲಗಳು ತಿಳಿಸಿವೆ.</p>.<p>ಸಾಮ್ರಾಟ್ಮೊಜೆ ಮೈಮೇಲೆ ಸದಾ 8 ರಿಂದ 10 ಕೆ.ಜಿ ಬಂಗಾರ ಹಾಕಿಕೊಂಡು ಒಡಾಡುತ್ತಿದ್ದರು. ಅವರನ್ನು ಸ್ಥಳೀಯರುಗೋಲ್ಡ್ ಮ್ಯಾನ್ ಎಂದು ಕರೆಯುತ್ತಿದ್ದರು.</p>.<p>ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಚಿನ್ನ ಹಾಕಿಕೊಂಡು ಒಡಾಡುತ್ತಿದ್ದ ಮೂವರು ಉದ್ಯಮಿಗಳು ಮೃತಪಟ್ಟಿದ್ದಾರೆ. 2011ರಲ್ಲಿ ಎಂಎನ್ಎಸ್ ಶಾಸಕ ರಮೇಶ್ ವಂಜಾಲೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರು ಕೂಡ ಕೆ.ಜಿಗಟ್ಟಲೇ ಚಿನ್ನ ಹಾಕಿಕೊಳ್ಳುತ್ತಿದ್ದರು.</p>.<p>ಚಿನ್ನದ ಅಂಗಿಯನ್ನು ಹಾಕಿಕೊಳ್ಳುತ್ತಿದ್ದ ಉದ್ಯಮಿ ದತ್ತಾತ್ರೇಯ ಫುಂಗೆಯನ್ನು 12 ಜನರ ಗುಂಪು ಹಲ್ಲೆ ಮಾಡಿ ಹತ್ಯೆ ಮಾಡಿತ್ತು. ಈ ಘಟನೆ 2016ರಲ್ಲಿ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>