<p><strong>ಪುಣೆ (ಪಿಟಿಐ): </strong>ಇಲ್ಲಿನ ಕೊಂಧ್ವಾ ಪ್ರದೇಶದಲ್ಲಿನ ವಸತಿ ಸಮುಚ್ಚಯದ ಗೋಡೆ ಶನಿವಾರ ಕುಸಿದು 15 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಗಾಗಿ ಈ ಗೋಡೆ ಪಕ್ಕದಲ್ಲೇ ಗುಡಿಸಲುಗಳನ್ನು ನಿರ್ಮಿಸಿಕೊಡಲಾಗಿತ್ತು. ಮಧ್ಯರಾತ್ರಿ ಗೋಡೆ ನೆಲಕ್ಕುರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಭಾರಿ ಮಳೆ ಸುರಿಯುತ್ತಿದ್ದುದರಿಂದ ಮಣ್ಣು ಸಡಿಲವಾಗಿರುವ ಸಾಧ್ಯತೆ ಇದೆ. ಇದರಿಂದಾಗಿಯೇ ಗೋಡೆ ಕುಸಿದಿದೆ. ಗೋಡೆ ಪಕ್ಕದಲ್ಲಿ ಸಾಕಷ್ಟು ಮಣ್ಣನ್ನು ಬೇಕಾಬಿಟ್ಟಿ ತೆಗೆಯಲಾಗಿತ್ತು ಎಂದು ಪುಣೆ ಪಾಲಿಕೆ ಆಯುಕ್ತ ಸೌರಭ್ ರಾವ್ ಹೇಳಿದ್ದಾರೆ.</p>.<p>ಮೃತರು ಬಿಹಾರ ಮತ್ತು ಉತ್ತರ ಪ್ರದೇಶದವರು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆಯಲ್ಲಿ ಶುಕ್ರವಾರ 73.1 ಮಿಲಿ ಮೀಟರ್ ಮಳೆಯಾಗಿದೆ. ಇದು 2010 ರಿಂದ ಜೂನ್ ತಿಂಗಳಲ್ಲಿ ಬಿದ್ದ ಎರಡನೇ ಅತಿ ಹೆಚ್ಚು ಮಳೆಯಾಗಿ ದಾಖಲಾಗಿದೆ.</p>.<p>12 ರಿಂದ 15 ಅಡಿ ಎತ್ತರದ ಗೋಡೆ ಮಧ್ಯರಾತ್ರಿ 1.30 ರಿಂದ 1.45 ರ ವೇಳೆಯಲ್ಲಿ ಕುಸಿದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯನ್ನು(ಎನ್ಡಿಆರ್ಎಫ್)ದುರ್ಘಟನೆ ನಡೆದ ಸ್ಥಳಕ್ಕೆ ಕಳುಹಿಸಲಾಗಿತ್ತು.</p>.<p>ಮೃತರಲ್ಲಿ ಒಂಬತ್ತು ಪುರುಷರು, ಇಬ್ವರು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಕೊಂಧ್ವಾ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="Subhead"><strong>ಇಬ್ಬರ ಬಂಧನ: </strong>ವಸತಿ ಸಮುಚ್ಚಯದ ಬಿಲ್ಡರ್ಗಳಾದ ವಿಪುಲ್ ಅಗರ್ವಾಲ್ ಮತ್ತು ವಿವೇಕ್ ಅಗರ್ವಾಲ್ ಅವರನ್ನು ಬಂಧಿಸಲಾಗಿದೆ.</p>.<p class="Subhead">ಎರಡನೇ ದಿನವೂ ಮಳೆ(ಮುಂಬೈ- ಪಿಟಿಐ): ಮುಂಬೈ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಎರಡನೇ ದಿನವಾದ ಶನಿವಾರವೂ ಭಾರಿ ಮಳೆ ಸುರಿದಿದೆ.</p>.<p>ಆದರೆ ನಗರದಲ್ಲಿ ಮಳೆಯಿಂದಾಗಿ ಸಾಮಾನ್ಯ ಜನಜೀವನಕ್ಕೆ ಅಷ್ಟೇನೂ ತೊಂದರೆಯಾಗಿಲ್ಲ. ಮಳೆ ಸಂಬಂಧ ಘಟನೆಗಳಲ್ಲಿ ಐವರು ಗಾಯಗೊಂಡಿದ್ದಾರೆ.</p>.<p>ಭಾರಿ ಮಳೆ ಕುರಿತು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿರುವ ಕಾರಣ ಕೇಂದ್ರ ರೈಲ್ವೆಯು ಕೆಲವು ಪ್ರಯಾಣಿಕರ ರೈಲುಗಳನ್ನು ರದ್ದುಪಡಿಸಿದೆ. ಇವುಗಳು ಮುಂಬೈ ಮತ್ತು ಪುಣೆ ನಡುವೆ ಸಂಚರಿಸುತ್ತವೆ.</p>.<p>ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕಿಟ್ನ 39 ಪ್ರಕರಣ ವರದಿಯಾಗಿವೆ. 104 ಮರಗಳು ಬುಡಮೇಲಾಗಿವೆ.</p>.<p><strong>ತನಿಖೆಗೆ ಆದೇಶ</strong></p>.<p>ಮುಂಬೈ (ಪಿಟಿಐ): ಪುಣೆಯಲ್ಲಿನ ಗೋಡೆ ಕುಸಿತ ಅವಘಡದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ತನಿಖೆಗೆ ಆದೇಶಿಸಿದ್ದಾರೆ.</p>.<p>‘ಇದೊಂದು ತೀರಾ ದುಃಖದ ಸಂಗತಿ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪುಣೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಸ್ತೃತವಾದ ತನಿಖೆ ನಡೆಸಲು ಸೂಚಿಸಲಾಗಿದೆ’ ಎಂದು ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ (ಪಿಟಿಐ): </strong>ಇಲ್ಲಿನ ಕೊಂಧ್ವಾ ಪ್ರದೇಶದಲ್ಲಿನ ವಸತಿ ಸಮುಚ್ಚಯದ ಗೋಡೆ ಶನಿವಾರ ಕುಸಿದು 15 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಗಾಗಿ ಈ ಗೋಡೆ ಪಕ್ಕದಲ್ಲೇ ಗುಡಿಸಲುಗಳನ್ನು ನಿರ್ಮಿಸಿಕೊಡಲಾಗಿತ್ತು. ಮಧ್ಯರಾತ್ರಿ ಗೋಡೆ ನೆಲಕ್ಕುರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಭಾರಿ ಮಳೆ ಸುರಿಯುತ್ತಿದ್ದುದರಿಂದ ಮಣ್ಣು ಸಡಿಲವಾಗಿರುವ ಸಾಧ್ಯತೆ ಇದೆ. ಇದರಿಂದಾಗಿಯೇ ಗೋಡೆ ಕುಸಿದಿದೆ. ಗೋಡೆ ಪಕ್ಕದಲ್ಲಿ ಸಾಕಷ್ಟು ಮಣ್ಣನ್ನು ಬೇಕಾಬಿಟ್ಟಿ ತೆಗೆಯಲಾಗಿತ್ತು ಎಂದು ಪುಣೆ ಪಾಲಿಕೆ ಆಯುಕ್ತ ಸೌರಭ್ ರಾವ್ ಹೇಳಿದ್ದಾರೆ.</p>.<p>ಮೃತರು ಬಿಹಾರ ಮತ್ತು ಉತ್ತರ ಪ್ರದೇಶದವರು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಣೆಯಲ್ಲಿ ಶುಕ್ರವಾರ 73.1 ಮಿಲಿ ಮೀಟರ್ ಮಳೆಯಾಗಿದೆ. ಇದು 2010 ರಿಂದ ಜೂನ್ ತಿಂಗಳಲ್ಲಿ ಬಿದ್ದ ಎರಡನೇ ಅತಿ ಹೆಚ್ಚು ಮಳೆಯಾಗಿ ದಾಖಲಾಗಿದೆ.</p>.<p>12 ರಿಂದ 15 ಅಡಿ ಎತ್ತರದ ಗೋಡೆ ಮಧ್ಯರಾತ್ರಿ 1.30 ರಿಂದ 1.45 ರ ವೇಳೆಯಲ್ಲಿ ಕುಸಿದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ಹಾಗೂ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯನ್ನು(ಎನ್ಡಿಆರ್ಎಫ್)ದುರ್ಘಟನೆ ನಡೆದ ಸ್ಥಳಕ್ಕೆ ಕಳುಹಿಸಲಾಗಿತ್ತು.</p>.<p>ಮೃತರಲ್ಲಿ ಒಂಬತ್ತು ಪುರುಷರು, ಇಬ್ವರು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ. ಮೂವರಿಗೆ ಗಾಯಗಳಾಗಿವೆ ಎಂದು ಕೊಂಧ್ವಾ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="Subhead"><strong>ಇಬ್ಬರ ಬಂಧನ: </strong>ವಸತಿ ಸಮುಚ್ಚಯದ ಬಿಲ್ಡರ್ಗಳಾದ ವಿಪುಲ್ ಅಗರ್ವಾಲ್ ಮತ್ತು ವಿವೇಕ್ ಅಗರ್ವಾಲ್ ಅವರನ್ನು ಬಂಧಿಸಲಾಗಿದೆ.</p>.<p class="Subhead">ಎರಡನೇ ದಿನವೂ ಮಳೆ(ಮುಂಬೈ- ಪಿಟಿಐ): ಮುಂಬೈ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಎರಡನೇ ದಿನವಾದ ಶನಿವಾರವೂ ಭಾರಿ ಮಳೆ ಸುರಿದಿದೆ.</p>.<p>ಆದರೆ ನಗರದಲ್ಲಿ ಮಳೆಯಿಂದಾಗಿ ಸಾಮಾನ್ಯ ಜನಜೀವನಕ್ಕೆ ಅಷ್ಟೇನೂ ತೊಂದರೆಯಾಗಿಲ್ಲ. ಮಳೆ ಸಂಬಂಧ ಘಟನೆಗಳಲ್ಲಿ ಐವರು ಗಾಯಗೊಂಡಿದ್ದಾರೆ.</p>.<p>ಭಾರಿ ಮಳೆ ಕುರಿತು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿರುವ ಕಾರಣ ಕೇಂದ್ರ ರೈಲ್ವೆಯು ಕೆಲವು ಪ್ರಯಾಣಿಕರ ರೈಲುಗಳನ್ನು ರದ್ದುಪಡಿಸಿದೆ. ಇವುಗಳು ಮುಂಬೈ ಮತ್ತು ಪುಣೆ ನಡುವೆ ಸಂಚರಿಸುತ್ತವೆ.</p>.<p>ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕಿಟ್ನ 39 ಪ್ರಕರಣ ವರದಿಯಾಗಿವೆ. 104 ಮರಗಳು ಬುಡಮೇಲಾಗಿವೆ.</p>.<p><strong>ತನಿಖೆಗೆ ಆದೇಶ</strong></p>.<p>ಮುಂಬೈ (ಪಿಟಿಐ): ಪುಣೆಯಲ್ಲಿನ ಗೋಡೆ ಕುಸಿತ ಅವಘಡದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ತನಿಖೆಗೆ ಆದೇಶಿಸಿದ್ದಾರೆ.</p>.<p>‘ಇದೊಂದು ತೀರಾ ದುಃಖದ ಸಂಗತಿ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಪುಣೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿಸ್ತೃತವಾದ ತನಿಖೆ ನಡೆಸಲು ಸೂಚಿಸಲಾಗಿದೆ’ ಎಂದು ಟ್ವಿಟರ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>