ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆಯಲ್ಲಿ ಗೋಡೆ ಕುಸಿತ| ಕೂಲಿಗಾಗಿ ಬಿಹಾರದಿಂದ ಬಂದಿದ್ದ 15 ಕಾರ್ಮಿಕರು ಸಾವು

Last Updated 29 ಜೂನ್ 2019, 5:59 IST
ಅಕ್ಷರ ಗಾತ್ರ

ಪುಣೆ:ಇಲ್ಲಿನ ಕೊಂಧ್ವಾ ಪ್ರದೇಶದಲ್ಲಿರುವ ತಲಾಬ್ ಮಸೀದಿ ಹತ್ತಿರದ ವಸತಿ ಸಮುಚ್ಚಯದ 60 ಅಡಿ ಎತ್ತರದ ಗೋಡೆಕುಸಿದಿದ್ದು, ಬಿಹಾರ, ಬಂಗಾಳದಿಂದ ಕೂಲಿ ಕೆಲಸಕ್ಕೆ ಬಂದಿದ್ದಕನಿಷ್ಠ 15 ಜನರು ಮೃತಪಟ್ಟಿರುವ ದುರಂತ ಶನಿವಾರ ಸಂಭವಿಸಿದೆ.

ಪುಣೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದಿದೆ. ಕಟ್ಟಡನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಗಾಗಿಈ ಗೋಡೆ ಪಕ್ಕದಲ್ಲೇ ಗುಡಿಸಲುಗಳನ್ನು ನಿರ್ಮಿಸಿಕೊಡಲಾಗಿತ್ತು. ಮಧ್ಯರಾತ್ರಿ ರಾತ್ರಿ ಸುಮಾರು 1.45ರ ವೇಳೆ ಕಾಂಪೌಂಡ್‌ ಗೋಡೆ ನೆಲಕ್ಕುರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ 9 ಪುರುಷರು, ಓರ್ವ ಮಹಿಳೆ ಹಾಗೂ ನಾಲ್ಕು ಮಕ್ಕಳು ಸೇರಿ ಒಟ್ಟು 15 ಮಂದಿ ಸಾವಿಗೀಡಾಗಿದ್ದಾರೆ ಎಂದು ಖಚಿತಪಡಿಸಲಾಗಿದ್ದು,ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಎನ್‌ಡಿಆರ್‌ಎಫ್‌ ತಂಡ ಸ್ಥಳಕ್ಕೆ ಧಾವಿಸಿದೆ.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು ಇನ್ನೂ ಇಬ್ಬರು ಮೂವರು ಸಿಲುಕಿರುವ ಸಾಧ್ಯತೆ ಇದೆ.

ಜಿಲ್ಲಾಧಿಕಾರಿ ನವಲ್‌ ಕಿಶೋರ್‌ ರಾಮ್‌ ಅವರು, ‘ಭಾರಿ ಮಳೆಯಿಂದಾಗಿ ಗೋಡೆ ಕುಸಿದಿದೆ. ನಿರ್ಮಾಣ ಕಂಪನಿಯ ಬೇಜಾವಬ್ದಾರಿ ಎದ್ದುಕಾಣುತ್ತಿದೆ. 15 ಜನರು ಮೃತಪಟ್ಟಿರುವುದು ಸಣ್ಣ ಸಂಗತಿಯಲ್ಲ. ಬಹುಶಃ ಮೃತರೆಲ್ಲ ಬಿಹಾರ, ಬಂಗಾಳದಿಂದ ಬಂದಿದ್ದವರಾಗಿರಬಹುದು. ಸರ್ಕಾರ ಅವರಿಗೆ ಅಗತ್ಯ ನೆರವು ನೀಡಲಿದೆ’ ಎಂದು ಹೇಳಿದ್ದಾರೆ.

ಪುಣೆ ಪೋಲಿಸ್‌ ಕಮಿಷನರ್‌ ಕೆ.ವೆಂಕಟೇಶಂ ಅವರು, ‘ದುರಂತಕ್ಕೆ ಕಾರಣ ಏನು ಎಂಬುದರ ಬಗ್ಗೆ ನಮ್ಮ ತಂಡ ಈ ಬಗ್ಗೆ ತನಿಖೆ ನಡೆಸಲಿದೆ.ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿರ್ಮಾಣ ಕಾಮಗಾರಿ ಆರಂಭಿಸುವ ಮುನ್ನ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರೀಕ್ಷಿಸಲಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT