<p><strong>ಭುವನೇಶ್ವರ:</strong> ಒಡಿಶಾದ ಪುರಿಯ ಜಗನ್ನಾಥ ರಥೋತ್ಸವಕ್ಕೆ ತಡೆಯಾಜ್ಞೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಮರು ಪರಿಶೀಲಿಸಬೇಕು ಎಂದು ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ದೇಗುಲದ ಅರ್ಚಕರು ಮನವಿ ಮಾಡಿದ್ದಾರೆ.</p>.<p>ಮನ್ನೆಚ್ಚರಿಕೆ ಕ್ರಮಗಳೊಂದಿಗೆ ಹಬ್ಬ ಆಚರಿಸಲು ಅನುವು ಮಾಡಿಕೊಡಬೇಕು ಎಂದೂ ಆಗ್ರಹಿಸಿದ್ದಾರೆ.</p>.<p>ಕೋವಿಡ್–19 ಸೋಂಕಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ರಥೋತ್ಸವಕ್ಕೆ ಗುರುವಾರ ತಡೆ ನೀಡಿತ್ತು.</p>.<p>‘ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು’ ಎಂದು ದೇಗುಲದ ಭಕ್ತರ ಸಂಘಟನೆ ಛತ್ತೀಸಾ ನಿಯೋಗ್ ಒತ್ತಾಯಿಸಿದೆ.</p>.<p>ಈ ಕುರಿತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಪತ್ರ ಬರೆದಿರುವ ಛತ್ತೀಸಾ ನಿಯೋಗ್, ‘ರಥ ಯಾತ್ರೆಗಾಗಿ ದೇಗುಲದ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರ ನಡೆಸಿರುವ ಸಿದ್ಧತಾ ಕಾರ್ಯಗಳು ಸುಪ್ರೀಂ ಕೋರ್ಟ್ ಗಮನಕ್ಕೆ ಬಂದಿಲ್ಲ’ ಎಂದಿದೆ.</p>.<p>ವಾರ್ಷಿಕ ರಥೋತ್ಸವ ನಡೆಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ‘ಶ್ರೀ ಜಗನ್ನಾಥ ಸೇನಾ’ ಮತ್ತು ‘ಶ್ರೀಕ್ಷೇತ್ರ ಸುರಕ್ಷಾ ಬಹಿನಿ’ ಎಂಬ ಸಂಘಟನೆಗಳು ಶುಕ್ರವಾರ ಪುರಿಯಲ್ಲಿ ಬಂದ್ ಆಚರಿಸಿವೆ.</p>.<p>ರಥಯಾತ್ರೆಯನ್ನು ರದ್ದುಪಡಿಸಬೇಕು ಇಲ್ಲವೇ ಮುಂದೂಡಬೇಕೆಂದು ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ಗೆ ಪಿಐಎಲ್ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದ ಪುರಿಯ ಜಗನ್ನಾಥ ರಥೋತ್ಸವಕ್ಕೆ ತಡೆಯಾಜ್ಞೆ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್ ಮರು ಪರಿಶೀಲಿಸಬೇಕು ಎಂದು ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ದೇಗುಲದ ಅರ್ಚಕರು ಮನವಿ ಮಾಡಿದ್ದಾರೆ.</p>.<p>ಮನ್ನೆಚ್ಚರಿಕೆ ಕ್ರಮಗಳೊಂದಿಗೆ ಹಬ್ಬ ಆಚರಿಸಲು ಅನುವು ಮಾಡಿಕೊಡಬೇಕು ಎಂದೂ ಆಗ್ರಹಿಸಿದ್ದಾರೆ.</p>.<p>ಕೋವಿಡ್–19 ಸೋಂಕಿನ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ರಥೋತ್ಸವಕ್ಕೆ ಗುರುವಾರ ತಡೆ ನೀಡಿತ್ತು.</p>.<p>‘ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಬೇಕು’ ಎಂದು ದೇಗುಲದ ಭಕ್ತರ ಸಂಘಟನೆ ಛತ್ತೀಸಾ ನಿಯೋಗ್ ಒತ್ತಾಯಿಸಿದೆ.</p>.<p>ಈ ಕುರಿತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಪತ್ರ ಬರೆದಿರುವ ಛತ್ತೀಸಾ ನಿಯೋಗ್, ‘ರಥ ಯಾತ್ರೆಗಾಗಿ ದೇಗುಲದ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರ ನಡೆಸಿರುವ ಸಿದ್ಧತಾ ಕಾರ್ಯಗಳು ಸುಪ್ರೀಂ ಕೋರ್ಟ್ ಗಮನಕ್ಕೆ ಬಂದಿಲ್ಲ’ ಎಂದಿದೆ.</p>.<p>ವಾರ್ಷಿಕ ರಥೋತ್ಸವ ನಡೆಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ‘ಶ್ರೀ ಜಗನ್ನಾಥ ಸೇನಾ’ ಮತ್ತು ‘ಶ್ರೀಕ್ಷೇತ್ರ ಸುರಕ್ಷಾ ಬಹಿನಿ’ ಎಂಬ ಸಂಘಟನೆಗಳು ಶುಕ್ರವಾರ ಪುರಿಯಲ್ಲಿ ಬಂದ್ ಆಚರಿಸಿವೆ.</p>.<p>ರಥಯಾತ್ರೆಯನ್ನು ರದ್ದುಪಡಿಸಬೇಕು ಇಲ್ಲವೇ ಮುಂದೂಡಬೇಕೆಂದು ಕೋರಿ ಸ್ವಯಂ ಸೇವಾ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ಗೆ ಪಿಐಎಲ್ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>