ಆರೋಪಿ ಮಣಿಕಂಠನ್ ಎಂಬಾತ ಮಾನಸಿಕ ಅಸ್ವಸ್ಥನಾಗಿದ್ದು, 2010ರಲ್ಲಿ ಮಧುರೈನಲ್ಲಿ ಚಿಕಿತ್ಸೆ ಪಡೆದಿದ್ದ. ಮನೆಯಲ್ಲಿಯೇ ಇದ್ದದ್ದರಿಂದಾಗಿ ಶುಕ್ರವಾರ ರಾತ್ರಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಓಡಿಹೋಗಿದ್ದಾನೆ. ಮನೆಯಿಂದ 100 ಮೀಟರ್ ದೂರಕ್ಕೆ ತೆರಳಿ ಮನೆಯ ಹೋರಭಾಗದಲ್ಲಿ ಕುಳಿತಿದ್ದ ವೃದ್ಧ ಮಹಿಳೆಯನ್ನು ಗುರಿಯಾಗಿಸಿಕೊಂಡು ಕುತ್ತಿಗೆಗೆ ಕಚ್ಚಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.