ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ| ಸೇನಾ ಮುಖ್ಯಸ್ಥ ರಾವುತ್ ಹೇಳಿಕೆಗೆ ಬಿಜೆಪಿ ನಾಯಕನ ಅಸಮಾಧಾನ

Last Updated 27 ಡಿಸೆಂಬರ್ 2019, 14:04 IST
ಅಕ್ಷರ ಗಾತ್ರ

ಲಖನೌ: ಸಿಎಎ ಪ್ರತಿಭಟನೆ ಕುರಿತು ಸೇನಾ ಮುಖ್ಯಸ್ಥ ಜ.ಬಿಪಿನ್ ರಾವುತ್ ನೀಡಿರುವ ಹೇಳಿಕೆಗೆ ಬಿಜೆಪಿಯ ಹಿರಿಯ ಮುಖಂಡ ಹಾಗೂ ಶಾಸಕ ರಾಧಾಮೋಹನ್ ದಾಸ್ ಅಗರ್‌ವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ರಾಧಾಮೋಹನ್ ದಾಸ್, ‘ರಾವುತ್ ಅವರ ಹೇಳಿಕೆಯು ಸೇನಾ ಕಾಯ್ದೆಯ ಉಲ್ಲಂಘನೆಯಾಗಿದ್ದು, ರಾಜಕೀಯ ಸ್ವರೂಪದ್ದಾಗಿವೆ. ಸರ್ಕಾರವು,ರಾವುತ್ ಅವರನ್ನು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥನನ್ನಾಗಿ ನೇಮಿಸಬಾರದು’ ಎಂದು ಒತ್ತಾಯಿಸಿದ್ದಾರೆ.

‘ಭಾರತೀಯ ಸೇನೆಯು ರಾಜಕೀಯ ವಿರೋಧಿ ಸಂಸ್ಥೆ ಎಂದು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರವಾಗಿದೆ. ಈ ಗುರುತನ್ನು ಕಳೆದುಕೊಂಡಲ್ಲಿ ನಾವೂ ಪಾಕಿಸ್ತಾನದಂತೆಯೇ ಆಗುತ್ತೇವೆ’ ಎಂದು ರಾಧಾಮೋಹನ್ ದಾಸ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT