‘ತೀರ್ಪು ಮರುಪರಿಶೀಲನಾ ಅರ್ಜಿ ಜತೆಗೆ ಸಲ್ಲಿಸಿರುವ ದಾಖಲೆಗಳನ್ನು ಅರ್ಜಿದಾರರು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಆದ್ದರಿಂದ ಅರ್ಜಿ ಜತೆಗೆ ಇವುಗಳನ್ನು ಪರಿಗಣಿಸಲಾಗದು’ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದರು. ದೇಶದ ಭದ್ರತೆಗೆ ಸಂಬಂಧಿಸಿರುವುದರಿಂದಾಗಿ, ಸಂಬಂಧಪಟ್ಟ ಇಲಾಖೆಯ ಅನುಮತಿ ಇಲ್ಲದೆಈ ಗೋಪ್ಯ ದಾಖಲೆಗಳನ್ನು ಯಾರೂ ಬಹಿರಂಗಗೊಳಿಸುವಂತಿಲ್ಲ ಎಂದು ನ್ಯಾಯಪೀಠಕ್ಕೆ ವೇಣುಗೋಪಾಲ್ ತಿಳಿಸಿದರು.