ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣ ಕುರಿತು ನೀಡಿರುವ ತೀರ್ಪು ಅನ್ನು ಮರುಪರಿಶೀಲಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ನೇತೃತ್ವದ ಪೀಠವು ಶುಕ್ರವಾರ ತೀರ್ಪು ಕಾಯ್ದಿರಿಸಿತು.
ರಫೇಲ್ ಒಪ್ಪಂದ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಕಳೆದ ವರ್ಷ ಡಿಸೆಂಬರ್ 14 ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿ ತೀರ್ಪು ನೀಡಿತ್ತು.
ಹಿಂದಿನ ತೀರ್ಪು ಮರುಪರಿಶೀಲಿಸಿ, ಮತ್ತೊಮ್ಮೆ ತನಿಖೆ ನಡೆಸಬೇಕು ಎಂದು ಕೋರಿಕೇಂದ್ರದ ಮಾಜಿ ಸಚಿವರಾದ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ಸಾಮಾಜಿಕ ಹೋರಾಟಗಾರರೂ ಆಗಿರುವ ವಕೀಲ ಪ್ರಶಾಂತ್ ಭೂಷಣ್ ಅವರು ಅರ್ಜಿ ಸಲ್ಲಿಸಿದ್ದಾರೆ.
ಎರಡು ಗಂಟೆಗಳವರೆಗೆ ನಡೆದ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್ ಅವರು, ‘ಕೋರ್ಟ್ಗೆ ಹಲವುಅಂಶಗಳನ್ನು ತಿಳಿಸದೇ ಮುಚ್ಚಿಡ ಲಾಗಿದೆ. ಆದ್ದರಿಂದ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ’ ಎಂದು ಕೋರಿದರು.
ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು, ಮರುಪರಿಶೀಲನಾ ಅರ್ಜಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.