ನವದೆಹಲಿ: ರಫೇಲ್ ಹಗರಣದ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಿದ್ದು ವಿಪಕ್ಷಗಳು ನಿರಾಶೆಯಿಂದ ಈ ರೀತಿಯ ಆರೋಪಗಳನ್ನು ಮಾಡುತ್ತಿವೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.ಈ ನಾಲ್ಕು ವರ್ಷ ಮೋದಿ ಸರ್ಕಾರ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಸಿಕ್ಕಿಲ್ಲ, ಆ ನಿರಾಸೆ ಕಾಂಗ್ರೆಸ್ಗೆ ಇದೆ ಎಂದಿದ್ದಾರೆ ರಕ್ಷಣಾ ಸಚಿವೆ.