ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲು ಇನ್ನೇನು ಕೆಲವೇ ಗಂಟೆಗಳು ಉಳಿದಿವೆ. ಹೀಗಿರುವಾಗ ಫಲಿತಾಂಶ ಬಗ್ಗೆ ಪಕ್ಷದ ಬೆಂಬಲಿಗರು ಕಾರ್ಯಕರ್ತರು ಆತಂಕ ಪಡಬೇಡಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
कांग्रेस पार्टी के प्रिय कार्यकर्ताओं ,
अगले 24 घंटे महत्वपूर्ण हैं। सतर्क और चौकन्ना रहें। डरे नहीं। आप सत्य के लिए लड़ रहे हैं । फर्जी एग्जिट पोल के दुष्प्रचार से निराश न हो। खुद पर और कांग्रेस पार्टी पर विश्वास रखें, आपकी मेहनत बेकार नहीं जाएगी।
ಮುಂದಿನ 24 ಗಂಟೆಗಳು ತುಂಬಾ ಮುಖ್ಯವಾದದು. ಎಚ್ಚರದಿಂದಿರಿ, ಭಯ ಪಡಬೇಡಿ, ನಾವುಸತ್ಯಕ್ಕಾಗಿ ಹೋರಾಡುತ್ತಿದ್ದೇವೆ. ಸುಳ್ಳು ಮತಗಟ್ಟೆ ಸಮೀಕ್ಷೆಗಳಿಂದ ಧೈರ್ಯಗುಂದಬೇಡಿಎಂದು ರಾಹುಲ್ ಬುಧವಾರ ಟ್ವೀಟಿಸಿದ್ದಾರೆ.
ತಮ್ಮ ಬಗ್ಗೆ ಹಾಗೂ ಪಕ್ಷದ ಮೇಲೆ ನಂಬಿಕೆ ಇರಲಿ. ನಿಮ್ಮ ಕಠಿಣ ಶ್ರಮ ವ್ಯರ್ಥವಾಗುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮತ್ತೊಮ್ಮೆ ಅಧಿಕಾರಕ್ಕೇರುತ್ತದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು, ಇತ್ತ ವಿಪಕ್ಷಗಳು ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪಿಸುತ್ತಿವೆ.