ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೌಕೀದಾರ್ ಚೋರ್ ಹೈ, ನಾವು ಮುಂದಿಟ್ಟ ಹೆಜ್ಜೆ ಹಿಂದಿಡಲಾರೆವು: ರಾಹುಲ್ ಗಾಂಧಿ

Last Updated 11 ಫೆಬ್ರುವರಿ 2019, 11:39 IST
ಅಕ್ಷರ ಗಾತ್ರ

ಲಖನೌ: ನಾನು ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಿಯಾಂಕಾ ಮತ್ತು ಸಿಂಧ್ಯಾ ಅವರಿಗೆ ಜವಾಬ್ದಾರಿ ನೀಡಿದಾಗ, ಉತ್ತರ ಪ್ರದೇಶದಲ್ಲಿ ಈಗಿರುವ ಬಿಜೆಪಿ ಸರ್ಕಾರದ ಅನ್ಯಾಯದ ವಿರುದ್ಧ ಹೋರಾಡುವಂತೆ ಹೇಳಿದ್ದೇನೆ ಎಂದಿದ್ದಾರೆ ರಾಹುಲ್ ಗಾಂಧಿ.

ಲಖನೌದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ರೋಡ್ ಶೋ ವೇಳೆ ಸಭಿಕರನ್ನುದ್ದೇಶಿಸಿ ಮಾತನಾಡಿದ ರಾಹುಲ್, ಮುಂದಿಟ್ಟ ಹೆಜ್ಜೆಯನ್ನು ನಾವು ಹಿಂದಿಡಲಾರೆವು. ನಮ್ಮ ಗುರಿ ಲೋಕಸಭಾ ಚುನಾವಣೆ ಆಗಿದ್ದರೂ, 2022ರಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ಗೆಲ್ಲುವ ದೊಡ್ಡ ಗುರಿ ನಮ್ಮ ಮುಂದಿದೆ ಎಂದು ನಾನು ಪ್ರಿಯಾಂಕಾ ಮತ್ತು ಸಿಂಧ್ಯಾಗೆ ಹೇಳಿದ್ದೇನೆ ಎಂದಿದ್ದಾರೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ದೇಶದ ಚೌಕೀದಾರ ಉತ್ತರಪ್ರದೇಶ ಸೇರಿದಂತೆ ಇತರ ರಾಜ್ಯ ಮತ್ತು ವಾಯುಪಡೆಯಿಂದ ಹಣ ಕದ್ದಿದ್ದು ಚೌಕೀದಾರ್ ಚೋರ್ ಹೈ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT