<p><strong>ನವದೆಹಲಿ: </strong>ಅಯೋಧ್ಯೆವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಿರುವ ತೀರ್ಪನ್ನುಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು ಎಂದು ಅವರು ಹೇಳಿದ್ದಾರೆ.</p>.<p>ನಾವು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ಎಲ್ಲ ಭಾರತೀಯರು ಸಹೋದರತ್ವ, ನಂಬಿಕೆ ಮತ್ತು ಪ್ರೀತಿಯನ್ನು ಕಾಪಾಡಿಕೊಳ್ಳುವ ಸಮಯವಿದು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ದಶಕಗಳಿಗೂ ಹಳೆಯದಾದ ರಾಮ ಜನ್ಮಭೂಮಿ - ಬಾಬರಿ ಮಸೀದಿ ವಿವಾದಕ್ಕೆ ಇಂದು ತೆರೆ ಬಿದ್ದಿದೆ. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಪರ್ಯಾಯ ಸ್ಥಳವನ್ನು ಒದಗಿಸುವಂತೆ ಆದೇಶಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.</p>.<p>ತೀರ್ಪು ಪ್ರಕಟಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿ ಕೂಡ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.</p>.<p>‘ಮಹಾತ್ಮ ಗಾಂಧಿಯವರ ಆದರ್ಶ ಮತ್ತು ಸಿದ್ಧಾಂತಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಇದು ಮಹಾತ್ಮ ಗಾಂಧಿಯವರು ಬಾಳಿದ ದೇಶ. ಶಾಂತಿ ಮತ್ತು ಅಹಿಂಸೆಗೆ ಬದ್ಧರಾಗಿರುವುದು ನಮ್ಮ ಕರ್ತವ್ಯ’ ಎಂದು ಬರೆದಿದ್ದರು.</p>.<p>ಕಾಂಗ್ರೆಸ್ ಕೂಡ ತೀರ್ಪನ್ನು ಸ್ವಾಗತಿಸಿದ್ದು, ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪನ್ನು ಕಾಂಗ್ರೆಸ್ ಗೌರವಿಸುತ್ತದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಯೋಧ್ಯೆವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶನಿವಾರ ಪ್ರಕಟಿಸಿರುವ ತೀರ್ಪನ್ನುಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ. ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು ಎಂದು ಅವರು ಹೇಳಿದ್ದಾರೆ.</p>.<p>ನಾವು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ಎಲ್ಲ ಭಾರತೀಯರು ಸಹೋದರತ್ವ, ನಂಬಿಕೆ ಮತ್ತು ಪ್ರೀತಿಯನ್ನು ಕಾಪಾಡಿಕೊಳ್ಳುವ ಸಮಯವಿದು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>ದಶಕಗಳಿಗೂ ಹಳೆಯದಾದ ರಾಮ ಜನ್ಮಭೂಮಿ - ಬಾಬರಿ ಮಸೀದಿ ವಿವಾದಕ್ಕೆ ಇಂದು ತೆರೆ ಬಿದ್ದಿದೆ. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಮಸೀದಿ ನಿರ್ಮಾಣಕ್ಕೆ ಪರ್ಯಾಯ ಸ್ಥಳವನ್ನು ಒದಗಿಸುವಂತೆ ಆದೇಶಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.</p>.<p>ತೀರ್ಪು ಪ್ರಕಟಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾಗಾಂಧಿ ಕೂಡ ಟ್ವೀಟ್ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದರು.</p>.<p>‘ಮಹಾತ್ಮ ಗಾಂಧಿಯವರ ಆದರ್ಶ ಮತ್ತು ಸಿದ್ಧಾಂತಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಇದು ಮಹಾತ್ಮ ಗಾಂಧಿಯವರು ಬಾಳಿದ ದೇಶ. ಶಾಂತಿ ಮತ್ತು ಅಹಿಂಸೆಗೆ ಬದ್ಧರಾಗಿರುವುದು ನಮ್ಮ ಕರ್ತವ್ಯ’ ಎಂದು ಬರೆದಿದ್ದರು.</p>.<p>ಕಾಂಗ್ರೆಸ್ ಕೂಡ ತೀರ್ಪನ್ನು ಸ್ವಾಗತಿಸಿದ್ದು, ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತೀರ್ಪನ್ನು ಕಾಂಗ್ರೆಸ್ ಗೌರವಿಸುತ್ತದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>