ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕು ಹಬ್ಬುತ್ತಿದ್ದು ಇತ್ತೀಚೆಗೆ ಇಟಲಿಗೆ ಹೋಗಿ ಬಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿ ಎಂದು ದೆಹಲಿಯಬಿಜೆಪಿ ಸಂಸದ ರಮೇಶ್ ಬಿಧೂರಿ ಹೇಳಿದ್ದಾರೆ.
ರಾಹುಲ್ ಗಾಂಧಿ ಇತ್ತೀಚೆಗೆ ಇಟಲಿಗೆ ಹೋಗಿ ಬಂದಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಲಾಗಿದೆಯೇ ಎಂಬುದು ನನಗೆ ತಿಳಿದಿಲ್ಲ. ಅವರಿಗೆ ಮಾರಣಾಂತಿಕ ಕೊರೊನಾ ವೈರಸ್ ಸೋಂಕು ತಗಲಿಲ್ಲ ಎಂಬುದನ್ನು ದೃಢಪಡಿಸಲು ವೈದ್ಯಕೀಯ ತಪಾಸಣೆಗೊಳಪಡಲಿ ಎಂದಿದ್ದಾರೆ ಬಿಧೂರಿ.
#WATCH BJP MP Ramesh Bidhuri on Rahul Gandhi's visit to Northeast Delhi: Before going there, I want to ask, you have come from Italy just six days back, have you taken screening test at the airport? Did you take precautions or you want to spread it (Coronavirus)? pic.twitter.com/fasiOkvFJH
ಸಂಸತ್ತಿನ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿಧೂರಿ, ಪ್ರಧಾನಿ ನರೇಂದ್ರ ಮೋದಿಯವರೇ ಕೊರೊನಾ ವೈರಸ್ ಬಗ್ಗೆ ಹೇಳಿದ್ದಾರೆ. ಭಾರತದಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದ್ದು,ಇದು ಗಂಭೀರ ಪರಿಸ್ಥಿತಿ ಎಂದಿದ್ದಾರೆ.