ಪಟ್ನಾ:ಬಿಹಾರದಲ್ಲಿ ಸಿಡಿಲಿನಿಂದಾಗಿ ಪ್ರಾಣ ಕಳೆದುಕೊಂಡ 83 ಜನರ ಕುಟುಂಬದವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಳೆದ 24 ಗಂಟೆ ಸಮಯದಲ್ಲಿ ಗುಡುಗು ಸಹಿತ ಮಳೆ ಸುರಿದಿತ್ತು. ಈ ವೇಳೆ ವಿವಿಧೆಡೆ 83 ಜನರು ಮೃತಪಟ್ಟಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಮುಖ್ಯಮಂತ್ರಿನಿತೀಶ್ ಕುಮಾರ್ ಅವರು,ಮೃತಪಟ್ಟವರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
Bihar Chief Minister Nitish Kumar announces Rs 4 lakhs each for 83 people who lost their lives due to thunderstorms in the state. https://t.co/EtiX2gLgt7 pic.twitter.com/03hVtPtZYn
— ANI (@ANI) June 25, 2020
ದುಃಖದ ಸಂಗತಿ:ಕೋವಿಂದ್
‘ಭಾರೀ ಮಳೆ ಮತ್ತು ಮಿಂಚಿನಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಪ್ರಾಣಹಾನಿ ಸಂಭವಿಸಿರುವ ಸುದ್ದಿ ತಿಳಿದು ದುಃಖವಾಯಿತು. ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ’ ಎಂದುರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Saddened to learn about loss of lives in parts of Uttar Pradesh and Bihar due to heavy rains and lightning. Administration is carrying out rescue and relief work. My condolences to the affected families.
— President of India (@rashtrapatibhvn) June 26, 2020
ದುರಂತಮಯ:ಮೋದಿ
‘ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಸಿಡಿಲು ಮತ್ತು ಮಳೆಗೆ ಹಲವು ಜೀವಗಳು ಬಲಿಯಾದ ದುರಂತಮಯ ಸುದ್ದಿ ತಿಳಿಯಿತು. ರಾಜ್ಯ ಸರ್ಕಾರಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
बिहार और उत्तर प्रदेश के कुछ जिलों में भारी बारिश और आकाशीय बिजली गिरने से कई लोगों के निधन का दुखद समाचार मिला। राज्य सरकारें तत्परता के साथ राहत कार्यों में जुटी हैं। इस आपदा में जिन लोगों को अपनी जान गंवानी पड़ी है, उनके परिजनों के प्रति मैं अपनी संवेदना प्रकट करता हूं।
— Narendra Modi (@narendramodi) June 25, 2020
ಆಘಾತಗೊಂಡಿದ್ದೇನೆ:ರಾಹುಲ್
‘ಬಿಹಾರದಲ್ಲಿ ಸಿಡಿಲಿನಿಂದಾಗಿ83 ಜನ ಮೃತಪಟ್ಟಿರುವ ಸುದ್ದಿ ಕೇಳಿ ಆಘಾತಗೊಂಡಿದ್ದೇನೆ. ಮೃತಪಟ್ಟವರ ಕುಟುಂಬದವವರಿಗೆ ನಷ್ಟ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ. ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
बिहार में बिजली गिरने से 83 लोगों की मौत की ख़बर सुनकर स्तब्ध हूँ। भगवान उनके प्रियजनों को इस दुख को सहन करने की शक्ति दे।
— Rahul Gandhi (@RahulGandhi) June 25, 2020
कॉंग्रेस कार्यकर्ताओं से मेरी अपील है कि पीड़ित परिवारों की हर संभव मदद करें।https://t.co/hz6u63FHkc
बिहार और उत्तर प्रदेश में कई स्थानों पर भारी बारिश और बिजली गिरने के कारण हुए जान-माल के नुक़सान के बारे में जानकर मुझे अत्यंत दुख पहुंचा है। इस दुर्घटना में कई लोगों को अपनी जान गंवानी पड़ी है।मैं मृतकों के परिजनों के प्रति अपनी हार्दिक संवेदनाएं व्यक्त करता हूँ।
— Rajnath Singh (@rajnathsingh) June 25, 2020
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.