2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲಿ ಜಯಗಳಿಸಿದ್ದರು. 2014ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಅಂತರ 1.5 ಲಕ್ಷದಷ್ಟಿತ್ತು. ಹೀಗಾಗಿ ಇದು ಸ್ಪರ್ಧೆಗೆ ಸುರಕ್ಷಿತ ಕ್ಷೇತ್ರ ಎಂದು ಪರಿಗಣಿಸಲಾಗುತ್ತಿದೆ. ರಾಹುಲ್ ಇಲ್ಲಿ ಸ್ಪರ್ಧಿಸಿದರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ಗೆ ನೆರವಾಗಲಿದೆ ಎಂದು ಕೇರಳ ಕಾಂಗ್ರೆಸ್ ಹೇಳಿದೆ. ಆದರೆ ರಾಹುಲ್ ಸಮ್ಮತಿ ನೀಡಿದ್ದಾರೆ ಎಂಬ ವರದಿಯನ್ನು ಪಕ್ಷ ನಿರಾಕರಿಸಿದೆ.