ಜೈಪುರ: ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ಹುದ್ದೆ ತೊರೆಯುವ ನಿರ್ಧಾರ ಕೈಗೊಂಡಿರುವ ರಾಹುಲ್ ಗಾಂಧಿ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದು, ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಬೇಕು ಎಂದು ಮನವಿ ಮಾಡಿರಾಜಸ್ಥಾನ ಕಾಂಗ್ರೆಸ್ ಬುಧವಾರ ನಿರ್ಣಯ ಕೈಗೊಂಡಿದೆ.
ರಾಜಸ್ಥಾನ ಕಾಂಗ್ರೆಸ್ನ ಉಸ್ತುವಾರಿ ಅವಿನಾಶ್ ಪಾಂಡೆ ಅವರ ನೇತೃತ್ವದಲ್ಲಿ ಜೈಪುರದ ಪಕ್ಷದ ಕಚೇರಿಯಲ್ಲಿ ಬುಧವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಪಕ್ಷದ ಪ್ರಮುಖರ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂಬ ನಿರ್ಣಯವನ್ನು ಸಭೆ ಕೈಗೊಂಡಿತು.
ಸಭೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ‘ ಜೈಪುರದ ಪಕ್ಷದ ಕಚೇರಿಯಲ್ಲಿ ಇಂದು ನಿರ್ಣಾಯಕ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಬೇಕು ಎಂದು ನಾವು ನಿರ್ಣಯ ಕೈಗೊಳ್ಳಲಿದ್ದೇವೆ,’ ಎಂದು ಹೇಳಿದ್ದರು.
Avinash Pande, Rajasthan Congress in-charge: Rajasthan Pradesh Congress Committee has passed a resolution, requesting Rahul Gandhi to continue as the party President. pic.twitter.com/UY21O5dDww
ಇನ್ನು ದೆಹಲಿಯ ರಾಹುಲ್ ಗಾಂಧಿ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರೇ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ. ಪಕ್ಷಕ್ಕೆ ರಾಹುಲ್ ಅವರ ನೇತೃತ್ವ ಅಗತ್ಯ ಎಂದು ಪೋಸ್ಟರ್ಗಳನ್ನು ಹಿಡಿದುಆಗ್ರಹಿಸಿದ್ದಾರೆ.
Delhi: Jagdish Tytler and other Congress leaders and supporters present outside the residence of Congress President Rahul Gandhi. pic.twitter.com/DzX3ITpi2X