<p><strong>ಶ್ರೀನಗರ:</strong> ರಾಹುಲ್ ಗಾಂಧಿ ಸೇರಿದಂತೆ ವಿರೋಧಪಕ್ಷಗಳ ಮುಖಂಡರ ನಿಯೋಗವನ್ನು ಶನಿವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಜಮ್ಮು ಕಾಶ್ಮೀರದ ಅಧಿಕಾರಿಗಳು ನಿಯೋಗದ ಸದಸ್ಯರನ್ನು ದೆಹಲಿಗೆ ವಾಪಸ್ ಕಳುಹಿಸಿದ್ದಾರೆ.</p>.<p>ಎಲ್ಜೆಡಿ ಮುಖಂಡ ಶರದ್ ಯಾದವ್, ಕಾಂಗ್ರೆಸ್ನ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಸಿಪಿಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ. ರಾಜಾ, ಡಿಎಂಕೆಯ ತಿರುಚಿ ಶಿವಾ, ಆರ್ಜೆಡಿಯ ಮನೋಜ್ ಝಾ ಮತ್ತು ತೃಣಮೂಲ ಕಾಂಗ್ರೆಸ್ನ ದಿನೇಶ್ ತ್ರಿವೇದಿ ನಿಯೋಗದಲ್ಲಿದ್ದರು.</p>.<p>ಮುಖಂಡರನ್ನು ಸಂಜೆ 4.15ರ ಹೊತ್ತಿಗೆ ವಿಮಾನದಲ್ಲಿ ದೆಹಲಿಗೆ ಕಳುಹಿಸಲಾಯಿತು. ರಾಜ್ಯ ಸರ್ಕಾರ ಇವರಿಗಾಗಿ ವಿಮಾನದಲ್ಲಿ ಸೀಟು ಕಾಯ್ದಿರಿಸಿತ್ತು. ಕಾಶ್ಮೀರದಲ್ಲಿ ಹಿಂಸಾಚಾರದ ವರದಿಗಳು ಬಂದಿವೆ ಎಂದು ಇತ್ತೀಚೆಗೆ ರಾಹುಲ್ ಆರೋಪಿಸಿದ್ದರು.</p>.<p>ಇದನ್ನು ಅಲ್ಲಗಳೆದಿದ್ದ ರಾಜ್ಯಪಾಲ, ಸ್ವತಃ ಭೇಟಿ ನೀಡುವಂತೆ ರಾಹುಲ್ಗೆ ಸವಾಲು ಹಾಕಿದ್ದರು. ರಾಹುಲ್ ಒಪ್ಪಿದ್ದರೂ, ಆಹ್ವಾನವನ್ನು ಸರ್ಕಾರ ವಾಪಸ್ ಪಡೆದಿತ್ತು.</p>.<p><strong>ಗಡಿನಿಯಂತ್ರಣ ರೇಖೆಯಲ್ಲಿ ಕಟ್ಟೆಚ್ಚರ:</strong> ಗಡಿಯಾಚೆಗಿನ ಭಯೋತ್ಪಾದನೆ ಬೆದರಿಕೆ ಹಿನ್ನೆಲೆಯಲ್ಲಿ ಕಾಶ್ಮೀರದ ಗಡಿನಿಯಂತ್ರಣ ರೇಖೆ ಹಾಗೂ ಅಂತರರಾಷ್ಟ್ರೀಯ ಗಡಿಯಲ್ಲಿ (ಐಬಿ) ಭದ್ರತಾಪಡೆಗಳು ಕಟ್ಟೆಚ್ಚರ ವಹಿಸಿವೆ.</p>.<p><strong>ಮಧ್ಯಪ್ರವೇಶಕ್ಕೆ ಅವಕಾಶ: ಪಿಸಿಐ ಮನವಿ</strong><br />ಕಾಶ್ಮೀರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಕ್ತ ಓಡಾಟಕ್ಕೆ ಇರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಕಾಶ್ಮೀರ್ ಟೈಮ್ಸ್ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಕ್ಕೆ ತನಗೆ ಅವಕಾಶ ನೀಡಬೇಕು ಎಂದು ಭಾರತೀಯ ಪತ್ರಿಕಾ ಮಂಡಳಿಯು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದೆ.</p>.<p>‘ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡುವುದು ಮತ್ತು ಪತ್ರಿಕೆಗಳ ಗುಣಮಟ್ಟವನ್ನು ಉತ್ತಮಪಡಿಸುವ ಉದ್ದೇಶದಿಂದಲೇ ಪತ್ರಿಕಾ ಮಂಡಳಿಯನ್ನು ಸ್ಥಾಪಿಸಿರುವುದರಿಂದ ಈ ವಿಚಾರದಲ್ಲಿ ಮಧ್ಯಪ್ರವೇಶಕ್ಕೆ ತನಗೆ ಅವಕಾಶ ನೀಡಬೇಕು’ ಎಂದು ಮಂಡಳಿ ವಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ರಾಹುಲ್ ಗಾಂಧಿ ಸೇರಿದಂತೆ ವಿರೋಧಪಕ್ಷಗಳ ಮುಖಂಡರ ನಿಯೋಗವನ್ನು ಶನಿವಾರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಜಮ್ಮು ಕಾಶ್ಮೀರದ ಅಧಿಕಾರಿಗಳು ನಿಯೋಗದ ಸದಸ್ಯರನ್ನು ದೆಹಲಿಗೆ ವಾಪಸ್ ಕಳುಹಿಸಿದ್ದಾರೆ.</p>.<p>ಎಲ್ಜೆಡಿ ಮುಖಂಡ ಶರದ್ ಯಾದವ್, ಕಾಂಗ್ರೆಸ್ನ ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಸಿಪಿಎಂನ ಸೀತಾರಾಂ ಯೆಚೂರಿ, ಸಿಪಿಐನ ಡಿ. ರಾಜಾ, ಡಿಎಂಕೆಯ ತಿರುಚಿ ಶಿವಾ, ಆರ್ಜೆಡಿಯ ಮನೋಜ್ ಝಾ ಮತ್ತು ತೃಣಮೂಲ ಕಾಂಗ್ರೆಸ್ನ ದಿನೇಶ್ ತ್ರಿವೇದಿ ನಿಯೋಗದಲ್ಲಿದ್ದರು.</p>.<p>ಮುಖಂಡರನ್ನು ಸಂಜೆ 4.15ರ ಹೊತ್ತಿಗೆ ವಿಮಾನದಲ್ಲಿ ದೆಹಲಿಗೆ ಕಳುಹಿಸಲಾಯಿತು. ರಾಜ್ಯ ಸರ್ಕಾರ ಇವರಿಗಾಗಿ ವಿಮಾನದಲ್ಲಿ ಸೀಟು ಕಾಯ್ದಿರಿಸಿತ್ತು. ಕಾಶ್ಮೀರದಲ್ಲಿ ಹಿಂಸಾಚಾರದ ವರದಿಗಳು ಬಂದಿವೆ ಎಂದು ಇತ್ತೀಚೆಗೆ ರಾಹುಲ್ ಆರೋಪಿಸಿದ್ದರು.</p>.<p>ಇದನ್ನು ಅಲ್ಲಗಳೆದಿದ್ದ ರಾಜ್ಯಪಾಲ, ಸ್ವತಃ ಭೇಟಿ ನೀಡುವಂತೆ ರಾಹುಲ್ಗೆ ಸವಾಲು ಹಾಕಿದ್ದರು. ರಾಹುಲ್ ಒಪ್ಪಿದ್ದರೂ, ಆಹ್ವಾನವನ್ನು ಸರ್ಕಾರ ವಾಪಸ್ ಪಡೆದಿತ್ತು.</p>.<p><strong>ಗಡಿನಿಯಂತ್ರಣ ರೇಖೆಯಲ್ಲಿ ಕಟ್ಟೆಚ್ಚರ:</strong> ಗಡಿಯಾಚೆಗಿನ ಭಯೋತ್ಪಾದನೆ ಬೆದರಿಕೆ ಹಿನ್ನೆಲೆಯಲ್ಲಿ ಕಾಶ್ಮೀರದ ಗಡಿನಿಯಂತ್ರಣ ರೇಖೆ ಹಾಗೂ ಅಂತರರಾಷ್ಟ್ರೀಯ ಗಡಿಯಲ್ಲಿ (ಐಬಿ) ಭದ್ರತಾಪಡೆಗಳು ಕಟ್ಟೆಚ್ಚರ ವಹಿಸಿವೆ.</p>.<p><strong>ಮಧ್ಯಪ್ರವೇಶಕ್ಕೆ ಅವಕಾಶ: ಪಿಸಿಐ ಮನವಿ</strong><br />ಕಾಶ್ಮೀರದಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಕ್ತ ಓಡಾಟಕ್ಕೆ ಇರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಕಾಶ್ಮೀರ್ ಟೈಮ್ಸ್ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮಧ್ಯಪ್ರವೇಶಕ್ಕೆ ತನಗೆ ಅವಕಾಶ ನೀಡಬೇಕು ಎಂದು ಭಾರತೀಯ ಪತ್ರಿಕಾ ಮಂಡಳಿಯು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದೆ.</p>.<p>‘ಪತ್ರಿಕಾ ಸ್ವಾತಂತ್ರ್ಯವನ್ನು ಕಾಪಾಡುವುದು ಮತ್ತು ಪತ್ರಿಕೆಗಳ ಗುಣಮಟ್ಟವನ್ನು ಉತ್ತಮಪಡಿಸುವ ಉದ್ದೇಶದಿಂದಲೇ ಪತ್ರಿಕಾ ಮಂಡಳಿಯನ್ನು ಸ್ಥಾಪಿಸಿರುವುದರಿಂದ ಈ ವಿಚಾರದಲ್ಲಿ ಮಧ್ಯಪ್ರವೇಶಕ್ಕೆ ತನಗೆ ಅವಕಾಶ ನೀಡಬೇಕು’ ಎಂದು ಮಂಡಳಿ ವಾದಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>