ನವದೆಹಲಿ: ಧ್ಯಾನಕ್ಕಾಗಿ ವಿದೇಶ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಅವರು ಶೀಘ್ರವೇ ಸ್ವದೇಶಕ್ಕೆ ಮರಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.
ಕಾಂಗ್ರೆಸ್ನ ಮಾಜಿ ಅಧ್ಯಕ್ಷರ ಅನುಪಸ್ಥಿತಿಯ ಗೊಂದಲಕ್ಕೆ ತೆರೆ ಎಳೆದಿರುವ ವಕ್ತಾರ ರಣದೀಪ್ ಸುರ್ಜೇ ವಾಲ ಅವರು, ರಾಹುಲ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಧ್ಯಾನಕ್ಕಾಗಿ ತೆರಳಿದ್ದಾರೆ ಎಂದು ತಿಳಿಸಿದ್ದಾರೆ. ರಾಹುಲ್ ಇಂಡೋ ನೇಷ್ಯಾಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದ್ದು, ಶೀಘ್ರವೇ ಭಾರತಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರ್ಥಿಕ ಹಿಂಜರಿತ, ಬೆಳೆಹಾನಿಗೆ ಪರಿಹಾರ, ಹೆಚ್ಚಳಗೊಂಡ ನಿರುದ್ಯೋಗ, ಉದ್ಯೋಗ ನಷ್ಟ ಹಾಗೂಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ಸಿಇಪಿ) ಒಪ್ಪಂದದ ವಿರುದ್ಧ 5ರಿಂದ 15ರ ತನಕ ಆಂದೋಲನ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಇದರಲ್ಲಿ ಸೋನಿಯಾ ಅಥವಾ ರಾಹುಲ್ ಭಾಗವಹಿಸುವುದಿಲ್ಲ ಎನ್ನಲಾಗಿದೆ