ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆ ಹುಸಿಯಾಗಿದ್ದು, ದಿನೇದಿನೇ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಲಾಕ್ಡೌನ್ ತೆರವುಗೊಳಿಸಿದ ನಂತರದ ಅವಧಿಯಲ್ಲಿ ಸರ್ಕಾರ ಸಮರ್ಪಕ ಕಾರ್ಯತಂತ್ರ ಅನುಸರಿಸದಿದ್ದರೆ, ಸೋಂಕು ಹೆಚ್ಚಿ ದೇಶ ಭಾರಿ ಅನಾಹುತ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.