ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಇಂದು ಮುಂಜಾನೆ ಎಸ್ಯುವಿಯಲ್ಲಿ ಮೀರತ್ಗೆ ಭೇಟಿ ನೀಡಲು ತೆರಳುತ್ತಿದ್ದರು. ಈ ವೇಳೆ ಪೊಲೀಸರು ದೆಹಲಿಯಿಂದ 60 ಕಿ.ಮೀ. ದೂರದ ಮೀರತ್ಗೆ ತೆರಳದಂತೆ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಅತಿ ಹೆಚ್ಚು ಜನ ಸೇರುವುದನ್ನು ನಿಷೇಧಿಸಿರುವ ಕಾರಣದಿಂದಾಗಿ ಪೊಲೀಸರು ಪ್ರವೇಶ ನಿರಾಕರಿಸಿದ್ದು, ಅಲ್ಲಿಂದ ಕಾಂಗ್ರೆಸ್ ನಾಯಕರು ದೆಹಲಿಗೆ ಹಿಂತಿರುಗಿದ್ದಾರೆ.