ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಈ ವಿಚಾರದಲ್ಲಿ ಮೋದಿ ಏಕೆ ಅಡಗಿ ಕುಳಿತಿದ್ದಾರೆ? ತಾಳ್ಮೆ ವಹಿಸಿದ್ದು ಸಾಕು, ಈಗ ಏನಾಗುತ್ತಿದೆ ಎಂಬುದನ್ನು ನಾವು ತಿಳಿಯಬೇಕಿದೆ. ನಮ್ಮ ಯೋಧರನ್ನು ಹತ್ಯೆ ಮಾಡಲು ಚೀನಾಗೆ ಎಷ್ಟು ಧೈರ್ಯ? ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಅವರಿಗೆ ಎಷ್ಟು ಧೈರ್ಯ? ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.