<p><strong>ನವದೆಹಲಿ</strong>: ಆಡಳಿತ ಪಕ್ಷದ ಸಂಸದರು ಸಂಸತ್ತಿನಲ್ಲಿ ಒಕ್ಕೊರಲಿನಿಂದ ಗದ್ದಲ ಎಬ್ಬಿಸಿ, ಒಟ್ಟಾಗಿ ಮುಗಿಬೀಳುವ ಮೂಲಕ ನರೇಂದ್ರ ಮೋದಿ ಅವರನ್ನು ಪ್ರಶ್ನಿಸದಂತೆತಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಅಲ್ಲದೆ, ಸಂಸತ್ತಿನ ಮಾಣಿಕ್ಯಂ ಟಾಗೂರ್ ಅವರು ಹಲ್ಲೆಗೆ ಮುಂದಾಗಿದ್ದಾರೆ ಅನ್ನೋದನ್ನು ವಿಡಿಯೋದಲ್ಲೇ ನೋಡಿ. ಅವರು ಸಚಿವ ಹರ್ಷವರ್ದನ್ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಲೇ ಇಲ್ಲ, ಆದರೂ ಬಿಜೆಪಿ ಸಂಸದರೇಗದ್ದಲ ಉಂಟು ಮಾಡಿದರು ಎಂದು ಆರೋಪಿಸಿದರು.</p>.<p>ನಾನು ಕೇರಳದ ವಯನಾಡ್ನಲ್ಲಿ ಮೆಡಿಕಲ್ ಕಾಲೇಜು ಇಲ್ಲ, ಅದಕ್ಕೆ ಸರ್ಕಾರದ ಕ್ರಮ ಏನು ಎಂಬ ಪ್ರಶ್ನೆಯನ್ನಷ್ಟೇ ಪ್ರಸ್ತಾಪಿಸಿದ್ದು, ಆದರೆ, ನನಗೆ ಮಾತನಾಡಲು ಅವಕಾಶವನ್ನೇ ನೀಡಲಿಲ್ಲ. ಸಂಸತ್ತಿನಲ್ಲಿ ನಾನು ಮಾತನಾಡಬಾರದುಎಂಬುದು ಬಿಜೆಪಿ ಉದ್ದೇಶವಾಗಿದೆ. ನಾನು ಮಾತನಾಡುವುದನ್ನು ಬಿಜೆಪಿ ಇಷ್ಟಪಡುವುದಿಲ್ಲ ಎಂದು ರಾಹುಲ್ ಆರೋಪಿಸಿದ್ದಾರೆ.</p>.<p>ಶುಕ್ರವಾರ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ನಂತರ ಹೇಳಿಕೆ ನೀಡಿರುವ ರಾಹುಲ್ ಗಾಂಧಿ 'ಈ ದಿನ ಎಲ್ಲರೂ ಒಕ್ಕೊರಲಿನಿಂದ ಕೂಗುವ ಮೂಲಕ ಗದ್ದಲ ಎಬ್ಬಿಸಿ ಸರ್ಕಾರವನ್ನು ಪ್ರಶ್ನಿಸುವುದಕ್ಕೆ ತಡೆಯೊಡ್ಡಲಾಯಿತು. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ನೀಡುತ್ತಿಲ್ಲ. ಈ ಕುರಿತು ಚರ್ಚೆಗೆ ಕರೆದರೆ ಅದನ್ನು ಬಿಜೆಪಿ ತಡೆಯುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ರಾಹುಲ್ ಗಾಂಧಿ ದೆಹಲಿ ಚುನಾವಣಾಪ್ರಚಾರ ಕಾರ್ಯಕ್ರಮದಲ್ಲಿ, ಪ್ರಧಾನಿ ಇದೇ ರೀತಿ ಭಾಷಣ ಮಾಡುತ್ತಿದ್ದರೆ ಬರುವ ಆರು ತಿಂಗಳ ನಂತರ ಪ್ರಧಾನಿ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಯುವಜನತೆ ಕೋಲು ಹಿಡಿದು ಅವರಿಗೆ ನಿರುದ್ಯೋಗ ಸಮಸ್ಯೆಯನ್ನು ಅರ್ಥಮಾಡಿಸುತ್ತಾರೆ ಎಂದು ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/uproar-in-loksabha-over-harsh-vardhans-remarks-on-rahul-703628.html" target="_blank">ಸಂಸತ್ತಿನಲ್ಲಿ ಗದ್ದಲ ಮೂಡಿಸಿದ ರಾಹುಲ್ ಗಾಂಧಿಯ 'ದಂಡ'</a></p>.<p>ಈ ಹೇಳಿಕೆಯನ್ನು ಪ್ರಸ್ತಾಪಿಸಿದ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಅವರು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು. ನಂತರ ಸಂಸತ್ತಿನಲ್ಲಿ ಗದ್ದಲ ಉಂಟಾಗಿ ಸಭೆಯನ್ನು ಮುಂದೂಡಲಾಯಿತು.<br />ಸಂಸತ್ತಿನಲ್ಲಿ ಹೇಳಿಕೆ ಓದುತ್ತಿದ್ದಂತೆ ಕಾಂಗ್ರೆಸ್ ಮಾಣಿಕ್ಯಂ ಟಾಗೂರ್ ಅವರು, ಸಚಿವ ಹರ್ಷವರ್ದನ್ ಅವರತ್ತ ಧಾವಿಸಿ ಬಂದರು. ಇದನ್ನು ಬಿಜೆಪಿ ಸಂಸದರು ತಡೆದರು. ಇದೇ ಘಟನೆಯನ್ನು ಪ್ರಸ್ತಾಪಿಸಿದ ಬಿಜೆಪಿಯ ಸಂಸದರಾದ ಜಗದಂಬಿಕಾ ಪಾಲ್ ಮಾಣಿಕ್ಯಂ ಟಾಗೂರ್ ಈ ರೀತಿ ಮಾಡಿರುವುದು ಖಂಡನೀಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಡಳಿತ ಪಕ್ಷದ ಸಂಸದರು ಸಂಸತ್ತಿನಲ್ಲಿ ಒಕ್ಕೊರಲಿನಿಂದ ಗದ್ದಲ ಎಬ್ಬಿಸಿ, ಒಟ್ಟಾಗಿ ಮುಗಿಬೀಳುವ ಮೂಲಕ ನರೇಂದ್ರ ಮೋದಿ ಅವರನ್ನು ಪ್ರಶ್ನಿಸದಂತೆತಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಅಲ್ಲದೆ, ಸಂಸತ್ತಿನ ಮಾಣಿಕ್ಯಂ ಟಾಗೂರ್ ಅವರು ಹಲ್ಲೆಗೆ ಮುಂದಾಗಿದ್ದಾರೆ ಅನ್ನೋದನ್ನು ವಿಡಿಯೋದಲ್ಲೇ ನೋಡಿ. ಅವರು ಸಚಿವ ಹರ್ಷವರ್ದನ್ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಲೇ ಇಲ್ಲ, ಆದರೂ ಬಿಜೆಪಿ ಸಂಸದರೇಗದ್ದಲ ಉಂಟು ಮಾಡಿದರು ಎಂದು ಆರೋಪಿಸಿದರು.</p>.<p>ನಾನು ಕೇರಳದ ವಯನಾಡ್ನಲ್ಲಿ ಮೆಡಿಕಲ್ ಕಾಲೇಜು ಇಲ್ಲ, ಅದಕ್ಕೆ ಸರ್ಕಾರದ ಕ್ರಮ ಏನು ಎಂಬ ಪ್ರಶ್ನೆಯನ್ನಷ್ಟೇ ಪ್ರಸ್ತಾಪಿಸಿದ್ದು, ಆದರೆ, ನನಗೆ ಮಾತನಾಡಲು ಅವಕಾಶವನ್ನೇ ನೀಡಲಿಲ್ಲ. ಸಂಸತ್ತಿನಲ್ಲಿ ನಾನು ಮಾತನಾಡಬಾರದುಎಂಬುದು ಬಿಜೆಪಿ ಉದ್ದೇಶವಾಗಿದೆ. ನಾನು ಮಾತನಾಡುವುದನ್ನು ಬಿಜೆಪಿ ಇಷ್ಟಪಡುವುದಿಲ್ಲ ಎಂದು ರಾಹುಲ್ ಆರೋಪಿಸಿದ್ದಾರೆ.</p>.<p>ಶುಕ್ರವಾರ ಸಂಸತ್ತಿನಲ್ಲಿ ನಡೆದ ಬೆಳವಣಿಗೆಗಳ ನಂತರ ಹೇಳಿಕೆ ನೀಡಿರುವ ರಾಹುಲ್ ಗಾಂಧಿ 'ಈ ದಿನ ಎಲ್ಲರೂ ಒಕ್ಕೊರಲಿನಿಂದ ಕೂಗುವ ಮೂಲಕ ಗದ್ದಲ ಎಬ್ಬಿಸಿ ಸರ್ಕಾರವನ್ನು ಪ್ರಶ್ನಿಸುವುದಕ್ಕೆ ತಡೆಯೊಡ್ಡಲಾಯಿತು. ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸುವ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ನೀಡುತ್ತಿಲ್ಲ. ಈ ಕುರಿತು ಚರ್ಚೆಗೆ ಕರೆದರೆ ಅದನ್ನು ಬಿಜೆಪಿ ತಡೆಯುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ರಾಹುಲ್ ಗಾಂಧಿ ದೆಹಲಿ ಚುನಾವಣಾಪ್ರಚಾರ ಕಾರ್ಯಕ್ರಮದಲ್ಲಿ, ಪ್ರಧಾನಿ ಇದೇ ರೀತಿ ಭಾಷಣ ಮಾಡುತ್ತಿದ್ದರೆ ಬರುವ ಆರು ತಿಂಗಳ ನಂತರ ಪ್ರಧಾನಿ ಮನೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ. ಯುವಜನತೆ ಕೋಲು ಹಿಡಿದು ಅವರಿಗೆ ನಿರುದ್ಯೋಗ ಸಮಸ್ಯೆಯನ್ನು ಅರ್ಥಮಾಡಿಸುತ್ತಾರೆ ಎಂದು ಹೇಳಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/uproar-in-loksabha-over-harsh-vardhans-remarks-on-rahul-703628.html" target="_blank">ಸಂಸತ್ತಿನಲ್ಲಿ ಗದ್ದಲ ಮೂಡಿಸಿದ ರಾಹುಲ್ ಗಾಂಧಿಯ 'ದಂಡ'</a></p>.<p>ಈ ಹೇಳಿಕೆಯನ್ನು ಪ್ರಸ್ತಾಪಿಸಿದ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಅವರು ರಾಹುಲ್ ಗಾಂಧಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದರು. ನಂತರ ಸಂಸತ್ತಿನಲ್ಲಿ ಗದ್ದಲ ಉಂಟಾಗಿ ಸಭೆಯನ್ನು ಮುಂದೂಡಲಾಯಿತು.<br />ಸಂಸತ್ತಿನಲ್ಲಿ ಹೇಳಿಕೆ ಓದುತ್ತಿದ್ದಂತೆ ಕಾಂಗ್ರೆಸ್ ಮಾಣಿಕ್ಯಂ ಟಾಗೂರ್ ಅವರು, ಸಚಿವ ಹರ್ಷವರ್ದನ್ ಅವರತ್ತ ಧಾವಿಸಿ ಬಂದರು. ಇದನ್ನು ಬಿಜೆಪಿ ಸಂಸದರು ತಡೆದರು. ಇದೇ ಘಟನೆಯನ್ನು ಪ್ರಸ್ತಾಪಿಸಿದ ಬಿಜೆಪಿಯ ಸಂಸದರಾದ ಜಗದಂಬಿಕಾ ಪಾಲ್ ಮಾಣಿಕ್ಯಂ ಟಾಗೂರ್ ಈ ರೀತಿ ಮಾಡಿರುವುದು ಖಂಡನೀಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>