<p><strong>ನವದೆಹಲಿ</strong>: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅಧ್ಯಕ್ಷರಾಗಿದ್ದಾರೆ, ಇನ್ನು ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.</p>.<p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ನಂತರ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ರಾಹುಲ್ ಗಾಂಧಿ ಮುಂದಾಗಿದ್ದರು. ಆದರೆ ಅಧ್ಯಕ್ಷ ಸ್ಥಾನ ತ್ಯಜಿಸಬೇಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಒತ್ತಾಯಿಸಿದ್ದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ಸೇರಿ ಚರ್ಚಿಸಿದ ನಂತರ ಸುರ್ಜೇವಾಲಾ ರಾಹುಲ್ ಅವರನಿರ್ಧಾರವನ್ನುತಿಳಿಸಿದ್ದಾರೆ. ಹಿರಿಯ ನೇತಾರ ಎ.ಕೆ.ಆ್ಯಂಟನಿ ನೇತೃತ್ವದ ಸಭೆಯಲ್ಲಿ ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿದೆ.</p>.<p>ಈ ಸಭೆಯಲ್ಲಿ ಅಹಮದ್ ಪಟೇಲ್, ಮಲ್ಲಿಕಾರ್ಜುನಖರ್ಗೆ, ಗುಲಾಂ ನಬಿ ಆಜಾದ್,ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್, ಸುರ್ಜೇವಾಲ, ಜೈರಾಂ ರಮೇಶ್ ಮತ್ತು ಆನಂದ ಶರ್ಮಾ ಉಪಸ್ಥಿತರಿದ್ದರು.</p>.<p><span style="color:#800000;"><strong>ಇದನ್ನೂ ಓದಿ</strong></span><br />*<a href="https://www.prajavani.net/stories/national/congress-party-president-rahul-639509.html" target="_blank">ರಾಹುಲ್ ಅಧ್ಯಕ್ಷ ಸ್ಥಾನ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ್ದೇವೆ: ಕಾಂಗ್ರೆಸ್</a><br />* <a href="https://www.prajavani.net/stories/national/rahul-gandhi-meets-2-congress-639911.html" target="_blank">ಅಧ್ಯಕ್ಷ ಸ್ಥಾನ ತ್ಯಾಗದ ದೃಢ ನಿರ್ಧಾರ ಕೈಗೊಂಡರೇ ರಾಹುಲ್?</a><br />*<a href="https://www.prajavani.net/stories/national/amethi-returning-officer-puts-630570.html" target="_blank">ರಾಹುಲ್ ಬ್ರಿಟನ್ ಪ್ರಜೆಯೇ?: ಪಕ್ಷೇತರ ಅಭ್ಯರ್ಥಿಯ ಪ್ರಶ್ನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು, ಅಧ್ಯಕ್ಷರಾಗಿದ್ದಾರೆ, ಇನ್ನು ಮುಂದೆಯೂ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.</p>.<p>ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ನಂತರ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ರಾಹುಲ್ ಗಾಂಧಿ ಮುಂದಾಗಿದ್ದರು. ಆದರೆ ಅಧ್ಯಕ್ಷ ಸ್ಥಾನ ತ್ಯಜಿಸಬೇಡಿ ಎಂದು ಕಾಂಗ್ರೆಸ್ ಪಕ್ಷದ ನಾಯಕರು ಒತ್ತಾಯಿಸಿದ್ದರು.</p>.<p>ಕಾಂಗ್ರೆಸ್ನ ಹಿರಿಯ ನಾಯಕರು ಬುಧವಾರ ನವದೆಹಲಿಯಲ್ಲಿ ಸಭೆ ಸೇರಿ ಚರ್ಚಿಸಿದ ನಂತರ ಸುರ್ಜೇವಾಲಾ ರಾಹುಲ್ ಅವರನಿರ್ಧಾರವನ್ನುತಿಳಿಸಿದ್ದಾರೆ. ಹಿರಿಯ ನೇತಾರ ಎ.ಕೆ.ಆ್ಯಂಟನಿ ನೇತೃತ್ವದ ಸಭೆಯಲ್ಲಿ ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆದಿದೆ.</p>.<p>ಈ ಸಭೆಯಲ್ಲಿ ಅಹಮದ್ ಪಟೇಲ್, ಮಲ್ಲಿಕಾರ್ಜುನಖರ್ಗೆ, ಗುಲಾಂ ನಬಿ ಆಜಾದ್,ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್, ಸುರ್ಜೇವಾಲ, ಜೈರಾಂ ರಮೇಶ್ ಮತ್ತು ಆನಂದ ಶರ್ಮಾ ಉಪಸ್ಥಿತರಿದ್ದರು.</p>.<p><span style="color:#800000;"><strong>ಇದನ್ನೂ ಓದಿ</strong></span><br />*<a href="https://www.prajavani.net/stories/national/congress-party-president-rahul-639509.html" target="_blank">ರಾಹುಲ್ ಅಧ್ಯಕ್ಷ ಸ್ಥಾನ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ್ದೇವೆ: ಕಾಂಗ್ರೆಸ್</a><br />* <a href="https://www.prajavani.net/stories/national/rahul-gandhi-meets-2-congress-639911.html" target="_blank">ಅಧ್ಯಕ್ಷ ಸ್ಥಾನ ತ್ಯಾಗದ ದೃಢ ನಿರ್ಧಾರ ಕೈಗೊಂಡರೇ ರಾಹುಲ್?</a><br />*<a href="https://www.prajavani.net/stories/national/amethi-returning-officer-puts-630570.html" target="_blank">ರಾಹುಲ್ ಬ್ರಿಟನ್ ಪ್ರಜೆಯೇ?: ಪಕ್ಷೇತರ ಅಭ್ಯರ್ಥಿಯ ಪ್ರಶ್ನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>