ನವದೆಹಲಿ (ಪಿಟಿಐ): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರು ಜಿ–20 ಸದಸ್ಯ ರಾಷ್ಟ್ರಗಳ ರಾಯಭಾರಿಗಳಿಗೆ ಬುಧವಾರ ಔತಣಕೂಟ ಏರ್ಪಡಿಸಿದ್ದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಔತಣಕೂಟಕ್ಕೆ ಮಹತ್ವ ಬಂದಿದೆ. ‘ಆರ್ಥಿಕ ಮತ್ತು ರಾಜಕೀಯ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಪಕ್ಷದ ನಿಲುವುಗಳನ್ನು ಈ ರಾಯಭಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು’ ಎಂದು ಮೂಲಗಳು ತಿಳಿಸಿವೆ.
ಈ ಔತಣಕೂಟಕ್ಕೆ ಪಾಕಿಸ್ತಾನದ ಹೈ ಕಮಿಷನರ್ಗೆ ಆಹ್ವಾನ ಇರಲಿಲ್ಲ.