‘ಪ್ರತಿ ಬಾರಿ ಮತದಾನ ಪ್ರಮಾಣ ಇಳಿಕೆಯಾಗುತ್ತಿದೆ. ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಪ್ರಜಾಪ್ರಭುತ್ವದ ಯಶಸ್ಸಿಗಾಗಿ ಶೇ 95 ರಷ್ಟು ಮತದಾನ ಆಗಬೇಕು. ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಉತ್ತಮ ಅಭ್ಯರ್ಥಿಗೆ ಮತ ನೀಡಬೇಕು. ಗರಿಷ್ಠ ಮತದಾನಕ್ಕಾಗಿ ಎಲ್ಲರೂ ಪಾಲ್ಗೊಳ್ಳಬೇಕು. ಮುಂದಿನ ದಿನಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಲಾಗುವುದು, ಈ ನಿಟ್ಟಿನಲ್ಲಿ ವೇಳಾಪಟ್ಟಿ ಎಲ್ಲವು ಸಿದ್ದವಾಗಿದೆ. ಆಯೋಗದಿಂದ ಅನುಮತಿ ಪಡೆಯುವುದು ಬಾಕಿ ಇದೆ’ ಎಂದರು.