ಚೆನ್ನೈ:ಮತದಾರರಿಗೆ ಹಂಚುವ ಉದ್ದೇಶದಿಂದ ಅಕ್ರಮವಾಗಿ ಹಣ ಸಂಗ್ರಹಿಸಿಡಲಾಗಿದೆ ಎನ್ನುವ ಮಾಹಿತಿಯ ಮೇರೆಗೆ ತಮಿಳುನಾಡಿನ ಹಲವು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದರು.
ಚೆನ್ನೈ, ನಮಕ್ಕಳ್ ಮತ್ತು ತಿರುನಲ್ವೇಲಿಯ 18 ಕಡೆಗಳಲ್ಲಿ ಶುಕ್ರವಾರ ಬೆಳಗಿನ ಜಾವದಿಂದಲೇ ದಾಳಿ ಪ್ರಾರಂಭಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ದಾಖಲೆಯಿಲ್ಲದ ಹಣ ಇದೆ ಎಂಬ ಆರೋಪದ ಮೇರೆಗೆ ಪಿಎಸ್ಕೆ ಎಂಜಿನಿಯರಿಂಗ್ ಕನ್ಸ್ಟ್ರಕ್ಷನ್ ಕಂಪನಿಯ ಕಚೇರಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದರು.
ಚುನಾವಣಾ ಉದ್ದೇಶಕ್ಕೆ ಹಣ ಸಾಗಿಸುತ್ತಿದ್ದ ಆರೋಪದ ಮೇರೆಗೆ ಕೆಲವು ಲೇವಾದೇವಿಗಾರರ ಮನೆ ಮೇಲೆಯೂ ದಾಳಿ ನಡೆಸಲಾಯಿತು. ಉದ್ಯಮಿಗಳಾದ ಆಕಾಶ ಭಾಸ್ಕರನ್ ಮತ್ತು ಸುಜಯ್ ರೆಡ್ಡಿ ಎಂಬುವರ ಮನೆಯಲ್ಲಿಯೂ ಪರಿಶೀಲನೆ ನಡೆಸಲಾಯಿತು ಎಂದು ಐ.ಟಿ ಅಧಿಕಾರಿಗಳು ತಿಳಿಸಿದ್ದಾರೆ.
ಎರಡನೆಯ ಹಂತದಲ್ಲಿ ತಮಿಳುನಾಡಿನ 39 ಕ್ಷೇತ್ರ ಮತ್ತು ಪುದುಚೇರಿಯ ಒಂದು ಕ್ಷೇತ್ರದಲ್ಲಿ ಏಪ್ರಿಲ್ 18ರಂದು ಮತದಾನ ನಡೆಯಲಿದೆ.