ನಾಗಪುರ, ಗಡ್ಚಿರೋಲಿ, ವಾರ್ಧಾ ಸೇರಿ ಹತ್ತು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರಬೇಕು ಎಂದು ಮಹಾರಾಷ್ಟ್ರ ವಿಧಾನಪರಿಷತ್ನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮುಂಢೆ ಅವರನ್ನು ಕಾಂಗ್ರೆಸ್ ಕೇಳಿಕೊಂಡಿದೆ ಎಂದು ಮೂಲಗಳು ಹೇಳಿವೆ.ಅತ್ಯುತ್ತಮ ಮಾತುಗಾರರಾಗಿರುವ ನಾಯಕರು ಕಾಂಗ್ರೆಸ್ನಲ್ಲಿ ಕಡಿಮೆ ಇದ್ದಾರೆ. ರಾಜ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡುತ್ತಿರುವ ಆರೋಪಗಳು ಜನರನ್ನು ಆಕರ್ಷಿಸುತ್ತಿವೆ. ಹಾಗಾಗಿ ಅವರನ್ನು ಪ್ರಚಾರಕ್ಕೆ ನೆಚ್ಚಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.ಮುಂಢೆ ಅವರೂ ಉತ್ತಮ ಮಾತುಗಾರ. ಈ ಇಬ್ಬರ ಮಾತಿನ ಮೂಲಕ ಬಿಜೆಪಿ ವಿರುದ್ಧದ ವಿಚಾರಗಳನ್ನು ಮತದಾರರಿಗೆ ತಲುಪಿಸಬಹುದು ಎಂಬುದು ಕಾಂಗ್ರೆಸ್ ಲೆಕ್ಕಾಚಾರ.