‘ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ, 370ನೇ ವಿಧಿಯನ್ನು ಕುರಿತ ಬಿಜೆಪಿಯ ನಿಲುವಿನಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಈ ವಿಧಿಯನ್ನು ರದ್ದು ಮಾಡಿದ್ದರಿಂದ ‘ಪಕ್ಷವು ತನ್ನ ನಿಲುವಿಗೆ ಬದ್ಧವಾಗಿರುತ್ತದೆ’ ಎಂದು ಸಾಬೀತುಪಡಿಸಿದಂತಾಗಿದೆ. ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸುವವರೆಗೂ ಪಾಕಿಸ್ತಾನದ ಜೊತೆ ಮಾತುಕತೆಯ ಸಾಧ್ಯತೆಯೇ ಇಲ್ಲ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಮಾತುಕತೆ ಏನಿದ್ದರೂ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಸೀಮಿತವಾಗಿರುತ್ತದೆ ಎಂಬುದನ್ನು ಆ ದೇಶವು ಅರ್ಥ ಮಾಡಿಕೊಳ್ಳಬೇಕು’ ಎಂದರು.