ಬೂಂದೀ ಮತ್ತು ಸವಾಯಿಮಾಧೋಪುರ್ ಜಿಲ್ಲೆಯ ನಡುವೆ ಪಾಪಡೀ ಗ್ರಾಮದ ಸಮೀಪ ಚಲಿಸುತ್ತಿದ್ದ ಬಸ್ ಮೇಜ್ ನದಿಗೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಬಸ್ ನದಿಗೆ ಬಿದ್ದ ನಂತರದಲ್ಲಿ ಸ್ಥಳೀಯ ಗ್ರಾಮಸ್ಥರು ನದಿಗೆ ಜಿಗಿದು ಹಲವರನ್ನು ರಕ್ಷಿಸಿದ್ದಾರೆ. ಗ್ರಾಮಸ್ಥರ ಪ್ರಕಾರ, ಕನಿಷ್ಠ 15 ಮಂದಿ ಸಾವಿಗೀಡಾಗಿದ್ದಾರೆ.