ಹೊಸಬರಿಗೆ ಮಣೆ ಹಾಕಲಾಗಿದ್ದು 17 ಮಂದಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಅವಕಾಶ ಕಲ್ಪಿಸಲಾಗಿದೆ. ಸಿ.ಪಿ.ಜೋಷಿ, ಹೇಮರಾಮ್ ಚೌಧರಿ ಸೇರಿದಂತೆ ಕೆಲವು ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನೀಡಿಲ್ಲ. ಕಾಂಗ್ರೆಸ್ ಮೈತ್ರಿಯ ಪಾಲುದಾರ ಪಕ್ಷ ರಾಷ್ಟ್ರೀಯ ಲೋಕ ದಳದ ಶಾಸಕರೊಬ್ಬರಿಗೂ ಸಚಿವ ಸ್ಥಾನ ನೀಡಲಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.