<p><strong>ಜೈಪುರ: </strong>ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವ ಶಾಸಕರು, ರಾಜ್ಯಸಭಾ ಚುನಾವಣೆ ಮುಗಿಯುವವರೆಗೆ ಜೊತೆಯಾಗಿ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋಮವಾರ ತಿಳಿಸಿದ್ದಾರೆ.</p>.<p>‘ಶಾಸಕರು ಒಂದೇ ಕುಟುಂಬದವರಂತೆ ಜತೆಗಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಹೋಟೆಲ್ನಲ್ಲಿರಿಸಲಾಗಿದೆ. ಅಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳೂ ನಡೆಯುತ್ತಿವೆ’ ಎಂದು ಪಾಂಡೆ ಹೇಳಿದ್ದಾರೆ.</p>.<p>‘ಶಾಸಕರನ್ನು ಸೆಳೆದು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಕಾರಣ ಈ ಬಗ್ಗೆ ಪೊಲೀಸರ ವಿಶೇಷ ತಂಡ ತನಿಖೆ ನಡೆಸುತ್ತಿದೆ’ ಎಂದಿದ್ದಾರೆ.</p>.<p>‘ನಮ್ಮ ಶಾಸಕರಲ್ಲಿ ಒಗ್ಗಟ್ಟಿದೆ. ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಸರ್ಕಾರಗಳನ್ನು ಉರುಳಿಸಿದ ರೀತಿಯಲ್ಲಿ ಇಲ್ಲಿನ ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಸಾಧ್ಯವಾಗದು’ ಎಂದೂ ಅವರು ಹೇಳಿದ್ದಾರೆ.</p>.<p>ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ರಮೇಶ್ ಮೀನಾ ಅವರ ಅನುಪಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಪಾಂಡೆ ‘ರಮೇಶ್ ಅವರು ವೈಯಕ್ತಿಕ ಕಾರಣಗಳಿಂದ ದೂರವಿದ್ದಾರೆ. ಆದರೆ, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸುವ ಶಾಸಕರು, ರಾಜ್ಯಸಭಾ ಚುನಾವಣೆ ಮುಗಿಯುವವರೆಗೆ ಜೊತೆಯಾಗಿ ಹೋಟೆಲ್ನಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋಮವಾರ ತಿಳಿಸಿದ್ದಾರೆ.</p>.<p>‘ಶಾಸಕರು ಒಂದೇ ಕುಟುಂಬದವರಂತೆ ಜತೆಗಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಹೋಟೆಲ್ನಲ್ಲಿರಿಸಲಾಗಿದೆ. ಅಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳೂ ನಡೆಯುತ್ತಿವೆ’ ಎಂದು ಪಾಂಡೆ ಹೇಳಿದ್ದಾರೆ.</p>.<p>‘ಶಾಸಕರನ್ನು ಸೆಳೆದು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಕಾರಣ ಈ ಬಗ್ಗೆ ಪೊಲೀಸರ ವಿಶೇಷ ತಂಡ ತನಿಖೆ ನಡೆಸುತ್ತಿದೆ’ ಎಂದಿದ್ದಾರೆ.</p>.<p>‘ನಮ್ಮ ಶಾಸಕರಲ್ಲಿ ಒಗ್ಗಟ್ಟಿದೆ. ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಸರ್ಕಾರಗಳನ್ನು ಉರುಳಿಸಿದ ರೀತಿಯಲ್ಲಿ ಇಲ್ಲಿನ ಸರ್ಕಾರವನ್ನು ಉರುಳಿಸಲು ಬಿಜೆಪಿಗೆ ಸಾಧ್ಯವಾಗದು’ ಎಂದೂ ಅವರು ಹೇಳಿದ್ದಾರೆ.</p>.<p>ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ರಮೇಶ್ ಮೀನಾ ಅವರ ಅನುಪಸ್ಥಿತಿಯ ಬಗ್ಗೆ ಪ್ರತಿಕ್ರಿಯಿಸಿದ ಪಾಂಡೆ ‘ರಮೇಶ್ ಅವರು ವೈಯಕ್ತಿಕ ಕಾರಣಗಳಿಂದ ದೂರವಿದ್ದಾರೆ. ಆದರೆ, ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>