ಜೈಪುರ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ವ್ಯಾಪ್ತಿಗೆ ಒಳಪಡದ 3.57 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಮತ್ತು ನಿರ್ಗತಿಕರಿಗೆ ಮುಂದಿನ ಎರಡು ತಿಂಗಳವರೆಗೆ ಉಚಿತ ಆಹಾರ ಧಾನ್ಯ ನೀಡಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.
ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸುವ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅನುಮೋದನೆ ನೀಡಿದ್ದಾರೆ. ಇದರಿಂದ ಜನರಿಗೆ ತಿಂಗಳಿಗೆ ತಲಾ ಐದು ಕೆ.ಜಿ ಗೋಧಿ ನೀಡಲು ಸಾಧ್ಯವಾಗುತ್ತದೆ.
ಕುಟುಂಬಗಳ ಸಮೀಕ್ಷೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಆಹಾರ ಧಾನ್ಯವನ್ನು ಒದಗಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.