ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ರಾಜೀವ್ ಹತ್ಯೆ: ಆರೋಪಿಗಳ ಬಿಡುಗಡೆಗೆ ಕೇಂದ್ರಕ್ಕೆ ವರದಿ ನೀಡಿಲ್ಲ’

Last Updated 15 ಸೆಪ್ಟೆಂಬರ್ 2018, 17:41 IST
ಅಕ್ಷರ ಗಾತ್ರ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ಬಂದಿರುವ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತಿಳಿಸಿದ್ದಾರೆ. ‌

ಈ ವಿಷಯದಲ್ಲಿ ಸಂವಿಧಾನಕ್ಕೆ ಅನುಗುಣವಾಗಿ ನ್ಯಾಯೋಚಿತವಾದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

‘ಕೇಂದ್ರ ಗೃಹ ಸಚಿವಾಲಯಕ್ಕೆ ಯಾವುದೇ ವರದಿಯನ್ನು ಕಳುಹಿಸಿಲ್ಲ. ಇದೊಂದು ಸಂಕೀರ್ಣವಾದ ಹಾಗೂ ಕಾನೂನಿನ ಪರಿಶೀಲನೆಗೆ ಒಳಪಟ್ಟಿರುವ ವಿಷಯ ಆಗಿರುವುದರಿಂದ ಸಂವಿಧಾನ ಬದ್ಧವಾಗಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ’ ಎಂದು ರಾಜಭವನದ ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT