ಚೆನ್ನೈ:ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರಣ್ಗೆ ತನ್ನ ಪರ ಖುದ್ದು ವಾದ ಮಂಡಿಸುವ ಹಕ್ಕನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ಅಭಿಪ್ರಾಯಪಟ್ಟಿದೆ.
ತನ್ನ ಮಗಳ ಮದುವೆಗಾಗಿಸಿದ್ಧತೆ ಮಾಡಿಕೊಳ್ಳಲು ಆರು ತಿಂಗಳು ರಜೆ ನೀಡಬೇಕು ಎಂದುಕೋರಿ ನಳಿನಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಖುದ್ದುವಾದ ಮಂಡಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.
ಈ ಬಗ್ಗೆ ನ್ಯಾಯಾಲಯದ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸರ್ಕಾರಿ ವಕೀಲರು, ಭದ್ರತಾ ವ್ಯವಸ್ಥೆಯ ಬಗ್ಗೆ ಸರ್ಕಾರದಿಂದ ಸೂಚನೆಗಳನ್ನು ಪಡೆಯಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.