ರಕ್ಷಣಾ ಸಚಿವರಾಗಿ ಶನಿವಾರ ಅಧಿಕಾರ ಸ್ವೀಕರಿಸಿದ ಬಳಿಕ, ಭೂ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್. ಧನೋಆ, ನೌಕಾಪಡೆಯ ನೂತನ ಮುಖ್ಯಸ್ಥ ಕರಂಬಿರ್ ಸಿಂಗ್ ಅವರ ಜೊತೆ ನಡೆಸಿದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಪ್ರತ್ಯೇಕವಾಗಿ ಪ್ರಾತ್ಯಕ್ಷಿಕೆ ಸಿದ್ಧಪಡಿಸುವಂತೆಸಚಿವಾಲಯದ ಇತರ ವಿಭಾಗಗಳಿಗೂ ಅವರು ಸೂಚನೆ ನೀಡಿದ್ದಾರೆ. ಸೇನೆಯ ವಿಭಾಗಗಳು ನೀಡಿದ ಪ್ರಾತ್ಯಕ್ಷಿಕೆಗಳ ಬಗ್ಗೆ ಸದ್ಯದಲ್ಲೇ ನಡೆಯಲಿರುವ ಉನ್ನತ ಮಟ್ಟದಸಭೆಯಲ್ಲಿ ಪರಾಮರ್ಶೆ ನಡೆಸಲಾಗುವುದು ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.