<p><strong>ನವದೆಹಲಿ:</strong> ‘ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದ್ದು, ಈಗ ದುರ್ಬಲ ರಾಷ್ಟ್ರವಾಗಿ ಉಳಿದಿಲ್ಲ. ರಾಷ್ಟ್ರೀಯ ಗೌರವ, ಗಡಿ ರಕ್ಷಣೆಯಂತಹ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಇಲ್ಲಿ ಹೇಳಿದರು.</p>.<p>ಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿ ಆಯೋಜಿಸಿದ್ದ ಆನ್ಲೈನ್ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಸಂಸತ್ತನ್ನು ಇಲ್ಲವೇ ದೇಶವನ್ನು ಕತ್ತಲಲ್ಲಿ ಇಡುವುದಿಲ್ಲ’ ಎಂದರು.</p>.<p>‘ಗಡಿ ವಿವಾದ ಕುರಿತ ಬೆಳವಣಿಗೆ– ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು’ ಎಂದು ಅವರು ಇದೇ ವೇದಿಕೆ ಮೂಲಕ ವಿರೋಧ ಪಕ್ಷಗಳಿಗೂ ಭರವಸೆ ನೀಡಿದರು.</p>.<p>‘ನಮ್ಮ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಲಾಗಿದೆ. ಈ ಶಕ್ತಿಯನ್ನು ಯಾವುದೇ ದೇಶವನ್ನು ಬೆದರಿಸಲು ಬಳಸುವುದಿಲ್ಲ, ನಮ್ಮ ಗಡಿ ರಕ್ಷಣೆಯೇ ಇದರ ಉದ್ದೇಶ’ ಎಂದೂ ಹೇಳಿದರು.</p>.<p>ಲಡಾಖ್ನ ಪೂರ್ವಭಾಗದ ಗಡಿಯಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧತೆಯನ್ನು ಪ್ರಸ್ತಾಪಿಸಿದ ಅವರು, ‘ನಮ್ಮೊಂದಿಗಿರುವ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಾಗಿ ಚೀನಾ ಹೇಳಿದೆ. ಭಾರತದ ನಿಲುವು ಸಹ ಇದೇ ಆಗಿದೆ’ ಎಂದರು.</p>.<p><strong>ಪಿಒಕೆ ಜನರೂ ಭಾರತ ಸೇರಲು ಇಚ್ಛಿಸಿದ್ದಾರೆ</strong></p>.<p>ಮೋದಿ ಸರ್ಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ರಾಜ್ಯದ ಚಹರೆಯನ್ನೇ ಬದಲಾಯಿಸಲಿದೆ. ಆಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ತಮ್ಮ ಪ್ರದೇಶವು ಭಾರತದ ಭಾಗವಾಗಬೇಕೆಂದು ಒತ್ತಾಯಿಸಲಿದ್ದಾರೆ ಎಂದು ರಾಜನಾಥ್ಸಿಂಗ್ ಹೇಳಿದರು.</p>.<p>ಪಿಒಕೆ ಜನರ ಈ ರೀತಿಯ ಒತ್ತಾಯವು ಈ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂಬ ಸಂಸತ್ತಿನ ನಿರ್ಣಯದ ಆಶಯವನ್ನು ಈಡೇರಿಸಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತ ತನ್ನ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದ್ದು, ಈಗ ದುರ್ಬಲ ರಾಷ್ಟ್ರವಾಗಿ ಉಳಿದಿಲ್ಲ. ರಾಷ್ಟ್ರೀಯ ಗೌರವ, ಗಡಿ ರಕ್ಷಣೆಯಂತಹ ವಿಷಯದಲ್ಲಿ ಎಂದಿಗೂ ರಾಜಿ ಆಗುವುದಿಲ್ಲ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಇಲ್ಲಿ ಹೇಳಿದರು.</p>.<p>ಜಮ್ಮು–ಕಾಶ್ಮೀರಕ್ಕೆ ಸಂಬಂಧಿಸಿ ಆಯೋಜಿಸಿದ್ದ ಆನ್ಲೈನ್ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಸಂಸತ್ತನ್ನು ಇಲ್ಲವೇ ದೇಶವನ್ನು ಕತ್ತಲಲ್ಲಿ ಇಡುವುದಿಲ್ಲ’ ಎಂದರು.</p>.<p>‘ಗಡಿ ವಿವಾದ ಕುರಿತ ಬೆಳವಣಿಗೆ– ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು’ ಎಂದು ಅವರು ಇದೇ ವೇದಿಕೆ ಮೂಲಕ ವಿರೋಧ ಪಕ್ಷಗಳಿಗೂ ಭರವಸೆ ನೀಡಿದರು.</p>.<p>‘ನಮ್ಮ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸಲಾಗಿದೆ. ಈ ಶಕ್ತಿಯನ್ನು ಯಾವುದೇ ದೇಶವನ್ನು ಬೆದರಿಸಲು ಬಳಸುವುದಿಲ್ಲ, ನಮ್ಮ ಗಡಿ ರಕ್ಷಣೆಯೇ ಇದರ ಉದ್ದೇಶ’ ಎಂದೂ ಹೇಳಿದರು.</p>.<p>ಲಡಾಖ್ನ ಪೂರ್ವಭಾಗದ ಗಡಿಯಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧತೆಯನ್ನು ಪ್ರಸ್ತಾಪಿಸಿದ ಅವರು, ‘ನಮ್ಮೊಂದಿಗಿರುವ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವುದಾಗಿ ಚೀನಾ ಹೇಳಿದೆ. ಭಾರತದ ನಿಲುವು ಸಹ ಇದೇ ಆಗಿದೆ’ ಎಂದರು.</p>.<p><strong>ಪಿಒಕೆ ಜನರೂ ಭಾರತ ಸೇರಲು ಇಚ್ಛಿಸಿದ್ದಾರೆ</strong></p>.<p>ಮೋದಿ ಸರ್ಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ರಾಜ್ಯದ ಚಹರೆಯನ್ನೇ ಬದಲಾಯಿಸಲಿದೆ. ಆಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ತಮ್ಮ ಪ್ರದೇಶವು ಭಾರತದ ಭಾಗವಾಗಬೇಕೆಂದು ಒತ್ತಾಯಿಸಲಿದ್ದಾರೆ ಎಂದು ರಾಜನಾಥ್ಸಿಂಗ್ ಹೇಳಿದರು.</p>.<p>ಪಿಒಕೆ ಜನರ ಈ ರೀತಿಯ ಒತ್ತಾಯವು ಈ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂಬ ಸಂಸತ್ತಿನ ನಿರ್ಣಯದ ಆಶಯವನ್ನು ಈಡೇರಿಸಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>