ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಬಿಹಾರ ಮಕ್ಕಳ ಸಾವು ಪ್ರಕರಣ

Last Updated 21 ಜೂನ್ 2019, 11:43 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರದ ಮುಜಪ್ಫರ್‌ಪುರದಲ್ಲಿ ಶಂಕಿತ ಮಿದುಳಿನ ತೀವ್ರ ಉರಿಯೂತ ಕಾಯಿಲೆ(ಎಇಎಸ್‌)ಗೆ 130 ಮಕ್ಕಳು ಬಲಿಯಾಗಿರುವ ವಿಷಯಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಯಾಯಿತು.

ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ ಮಕ್ಕಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿದವು.

ರಾಜ್ಯಸಭೆಯಲ್ಲಿ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ನ್ಯೂಜಿಲೆಂಡ್‌ ಮತ್ತು ಶ್ರೀಲಂಕಾದಲ್ಲಿ ಭಯೋತ್ಪಾದಕರ ದಾಳಿಗೆ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ವಿರೋಧ ಪಕ್ಷದ ಸದಸ್ಯರು ಬಿಹಾರದಲ್ಲಿ ಮೃತಪಟ್ಟಿರುವ ಮಕ್ಕಳಿಗೂ ಶ್ರದ್ಧಾಂಜಲಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಅನಂತರ ಎಲ್ಲರು ಎದ್ದು ನಿಂತು ಮೌನವಾಗಿ ಮೃತ ಮಕ್ಕಳಿಗೆ ಸಂತಾಪ ಸೂಚಿಸುವಂತೆ ಸಭಾಧ್ಯಕ್ಷರು ಸೂಚಿಸಿದರು.

ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸದಸ್ಯ ಬಿನೋಯ್‌ ವಿಶ್ವಂ (ಸಿಪಿಐ), ಈ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿದ್ದರು. ಆದರೆ ಸಭಾಪತಿ ಇದಕ್ಕೆ ಅವಕಾಶ ನೀಡಲಿಲ್ಲ.

‘ಮಕ್ಕಳ ಸಾವು ಆಕಸ್ಮಿಕ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದನ್ನು ಕೊಲೆ ಎನ್ನಬೇಕು‘ ಎಂದು ಬಿನೋಯ್‌ ಹೇಳಿದ್ದಾರೆ.

‘130 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತವಾಗಿ ಹೇಳಲಾಗುತ್ತಿದೆ. ಆದರೆ 180ಕ್ಕೂ ಹೆಚ್ಚು ಮಕ್ಕಳು ಈ ರೋಗಕ್ಕೆ ಬಲಿಯಾಗಿದ್ದಾರೆ‘ ಎಂದೂ ಅವರು ಸಭೆಯಲ್ಲಿತಿಳಿಸಿದ್ದಾರೆ.

’ಆಸ್ಪತ್ರೆಗಳಲ್ಲಿ ಔಷಧ ಮತ್ತು ಮೂಲ ಸೌಕರ್ಯ ಕೊರತೆ ಇದೆ‘ ಎಂಬುದನ್ನೂ ಸಭೆಯ ಗಮನಕ್ಕೆ ತಂದಿದ್ದಾರೆ.

ಮಕ್ಕಳ ಸಾವಿನ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್‌ ಹಾಗೂ ಇತರ ವಿರೋಧ ಪಕ್ಷಗಳು ಕೋರಿದ್ದವು ಆದರೆ ಸಭಾಪತಿ ಇದಕ್ಕೆ ಅವಕಾಶ ನೀಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT