<p><strong>ನವದೆಹಲಿ:</strong> ಐದು ರಾಜ್ಯಗಳ ಸೋಲಿನ ನಂತರ ಮೊದಲ ಬಾರಿಗೆ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಪ್ರತಿಧ್ವನಿಸಿದೆ.</p>.<p>ಗೃಹ ಸಚಿವ ರಾಜನಾಥ್ ಸಿಂಗ್ ಭಾಷಣ ಆರಂಭಿಸುತ್ತಿದ್ದಂತೆಯೇ ಬಿಜೆಪಿಯ ಹೆಚ್ಚಿನ ಸಂಸದರು, ‘ಮಂದಿರ ನಿರ್ಮಾಣ ಯಾವಾಗ‘ ಎಂದು ಪ್ರಶ್ನಿಸಿದರು.</p>.<p>ಉತ್ತರ ಪ್ರದೇಶದ ಸಂಸದರಾದ ರವೀಂದ್ರ ಕುಶ್ವಾಹ ಹಾಗೂ ಹರಿ ನಾರಾಯಣ ರಾಜಭರ್ ಎತ್ತಿದ ಪ್ರಶ್ನೆಗೆ ಇತರ ಸಂಸದರು ಧ್ವನಿಗೂಡಿಸಿದರು.</p>.<p>‘ಮಂದಿರ ನಿರ್ಮಾಣ ಆಗಲೇಬೇಕು ಎಂಬುವುದು ಎಲ್ಲರ ಬಯಕೆಯಾಗಿದೆ. ನೀವು ತಾಳ್ಮೆಯಿಂದ ಇರಬೇಕು’ ಎಂದು ಸಿಂಗ್ ಸಮಾಧಾನಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಐದು ರಾಜ್ಯಗಳಲ್ಲಿ ಸೋತಿರುವ ಬಿಜೆಪಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಠಿಣ ಸವಾಲು ಎದುರಾಗಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಮಂದಿರ ನಿರ್ಮಾಣಕ್ಕೆ ಮುಂದಾದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ಸಿಗಲಿದೆ ಎಂದು ಕೆಲವು ಸಂಸದರು ಸಲಹೆ ನೀಡಿದರು.</p>.<p>‘ವಿರೋಧ ಪಕ್ಷಗಳಿಗಿಂತ ನಾವು ಬಹಳ ಮುಂದಿದ್ದೇವೆ. ಈಗ ನಮಗೆ ಅನುಕೂಲಕರ ವಾತಾವರಣವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಐದು ರಾಜ್ಯಗಳ ಸೋಲಿನ ನಂತರ ಮೊದಲ ಬಾರಿಗೆ ಮಂಗಳವಾರ ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯ ಪ್ರತಿಧ್ವನಿಸಿದೆ.</p>.<p>ಗೃಹ ಸಚಿವ ರಾಜನಾಥ್ ಸಿಂಗ್ ಭಾಷಣ ಆರಂಭಿಸುತ್ತಿದ್ದಂತೆಯೇ ಬಿಜೆಪಿಯ ಹೆಚ್ಚಿನ ಸಂಸದರು, ‘ಮಂದಿರ ನಿರ್ಮಾಣ ಯಾವಾಗ‘ ಎಂದು ಪ್ರಶ್ನಿಸಿದರು.</p>.<p>ಉತ್ತರ ಪ್ರದೇಶದ ಸಂಸದರಾದ ರವೀಂದ್ರ ಕುಶ್ವಾಹ ಹಾಗೂ ಹರಿ ನಾರಾಯಣ ರಾಜಭರ್ ಎತ್ತಿದ ಪ್ರಶ್ನೆಗೆ ಇತರ ಸಂಸದರು ಧ್ವನಿಗೂಡಿಸಿದರು.</p>.<p>‘ಮಂದಿರ ನಿರ್ಮಾಣ ಆಗಲೇಬೇಕು ಎಂಬುವುದು ಎಲ್ಲರ ಬಯಕೆಯಾಗಿದೆ. ನೀವು ತಾಳ್ಮೆಯಿಂದ ಇರಬೇಕು’ ಎಂದು ಸಿಂಗ್ ಸಮಾಧಾನಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಐದು ರಾಜ್ಯಗಳಲ್ಲಿ ಸೋತಿರುವ ಬಿಜೆಪಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಠಿಣ ಸವಾಲು ಎದುರಾಗಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.</p>.<p>ಮಂದಿರ ನಿರ್ಮಾಣಕ್ಕೆ ಮುಂದಾದರೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ಸಿಗಲಿದೆ ಎಂದು ಕೆಲವು ಸಂಸದರು ಸಲಹೆ ನೀಡಿದರು.</p>.<p>‘ವಿರೋಧ ಪಕ್ಷಗಳಿಗಿಂತ ನಾವು ಬಹಳ ಮುಂದಿದ್ದೇವೆ. ಈಗ ನಮಗೆ ಅನುಕೂಲಕರ ವಾತಾವರಣವಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>