ಡೆಹ್ರಾಡೂನ್: ‘ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವವಿಲ್ಲದೆ ರಾಮ ದೇವಾಲಯ ನಿರ್ಮಾಣ ವಿವಾದ ಇತ್ಯರ್ಥ ಮತ್ತು ಪೌರತ್ವ ಕಾಯ್ದೆಗೆ ತಿದ್ದುಪಡಿ ಸಾಧ್ಯವಾಗುತ್ತಿರಲಿಲ್ಲ’ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಶನಿವಾರ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ ಅಧಿಕಾರಾವಧಿಯಲ್ಲಿ ದೊಡ್ಡ ಮತ್ತು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಶ್ಲಾಘಿಸಿದ್ದಾರೆ.
ಉತ್ತರಾಖಂಡ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ವರ್ಚುವಲ್ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಮೋದಿ ನಾಯಕತ್ವದಲ್ಲಿ ದೇಶ ಕೊರೊನೊ ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿ ಹೋರಾಟ ನಡೆಸಿದೆ’ ಎಂದಿದ್ದಾರೆ.