ಕೊರೊನಾ ಸೋಂಕು ಭೀತಿಯಿಂದಾಗಿ ಸ್ವಾಮೀಜಿಗಳನ್ನು ಆಹ್ವಾನಿಸಿಲ್ಲ. ಮಾ. 24ರವರೆಗೆ ಪರಿಸ್ಥಿತಿ ಗಮನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಮಮಂದಿರ ಟ್ರಸ್ಟ್ನ ಕಾರ್ಯದರ್ಶಿ ಚಪತ್ ರೈ ತಿಳಿಸಿದರು. ರಾಜಸ್ಥಾನದ ಕಲಾವಿದರು ರೂಪಿಸಿದ್ದ 9.5 ಕೆ.ಜಿ. ತೂಕದ ಪೀಠದ ಮೇಲೆ ಮೂರ್ತಿಗಳನ್ನು ಮಾರ್ಚ್ 25ರಂದು ಪ್ರತಿಷ್ಠಾಪಿಸಲಾಗಿತ್ತು. ಈ ಮಧ್ಯೆ, ಸೋಂಕು ಭೀತಿ ಹಿನ್ನೆಲೆಯಲ್ಲಿ ಅಯೋಧ್ಯೆಯ ಎಲ್ಲದೇವಸ್ಥಾನಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ.