ದೇಶದಲ್ಲಿನ ಪರಿಸ್ಥಿತಿ ನೋಡಿಕೊಂಡು ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಟ್ರಸ್ಟ್ನ ಸದಸ್ಯ ಅನಿಲ್ ಮಿಶ್ರಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಈ ಮಧ್ಯೆ ಚೀನಾ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಹಿಂದೂ ಮಹಾಸಭಾದ ಕಾರ್ಯಕರ್ತರು ಚೀನಾ ಧ್ವಜವನ್ನು ದಹಿಸಿದ್ದರೆ, ವಿಶ್ವ ಹಿಂದೂ ಪರಿಷತ್, ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಪ್ರತಿಕೃತಿ ದಹನ ಮಾಡಿದೆ ಅಲ್ಲದೆ ಚೀನಾ ಉತ್ಪನ್ನಗಳನ್ನು ನಾಶಪಡಿಸಿದೆ.