ಈ ಬಗ್ಗೆ ಪ್ರತಿಕ್ರಿಯಿಸಿದ ಆರ್ಪಿಐ ಪಕ್ಷದ ವಕ್ತಾರ ಮತ್ತು ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಹತೇಕರ್,ಪಕ್ಷದ ನಾಯಕರಿಗೆ ಸ್ಥಳೀಯ ಪೊಲೀಸರು ಸರಿಯಾದ ಭದ್ರತೆ ನೀಡಿಲ್ಲ ಎಂದು ದೂರಿದ್ದಾರೆ.ಅಠವಾಳೆ ಅವರು ಕಾರ್ಯಕ್ರಮ ಮುಗಿಸಿ ಅಲ್ಲಿಂದ ಹೊರಡುವ ಹೊತ್ತಿಗೆ ಈ ಘಟನೆ ನಡೆದಿದೆ.ಕೇಂದ್ರ ಸಚಿವರಾದ ಅವರಿಗೆ ಜೆಡ್ ಪ್ಲಸ್ ಭದ್ರತೆ ಇದ್ದರೂ ಸ್ಥಳೀಯ ಪೊಲೀಸರು ಸರಿಯಾದ ಭದ್ರತಾ ವ್ಯವಸ್ಥೆ ಮಾಡಿಲ್ಲ ಎಂದಿದ್ದಾರೆ ಮಹತೇಕರ್.