ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆ: ತನಿಖಾಧಿಕಾರಿ ಅಮಾನತು

Last Updated 31 ಜುಲೈ 2019, 18:49 IST
ಅಕ್ಷರ ಗಾತ್ರ

ಜೈಪುರ: ಅತ್ಯಾಚಾರ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಸಂತ್ರಸ್ತೆಯೊಬ್ಬರು ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಜೈಪುರದ ವೈಶಾಲಿ ನಗರ ಠಾಣೆಯ ಪೊಲೀಸ್‌ ಅಧಿಕಾರಿ ಸಂಜಯ್‌ ಗೋದಾರ ಅಮಾನತುಗೊಂಡವರು.

ಜೂನ್‌ 5ರಂದು ಮಹಿಳೆ ದೂರು ದಾಖಲಿಸಿದ್ದು, ಈ ಕುರಿತು ಸಂಜಯ್‌ ಅವರು ತನಿಖೆ ನಡೆಸುತ್ತಿದ್ದರು. ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಕರಣದ ತನಿಖೆಯನ್ನು ಸಿಬಿ–ಸಿಐಡಿಗೆ ಒಪ್ಪಿಸಲಾಗಿದೆ.

ಆತ್ಮಹತ್ಯೆ ಪ್ರಕರಣವನ್ನು ರಾಜಸ್ಥಾನ ವಿಧಾನಸಭೆಯಲ್ಲಿ ವಿರೋಧ ಪಕ್ಷ ಬಿಜೆಪಿ ಪ್ರಸ್ತಾಪಿಸಿತ್ತು.

ಮಹಿಳೆಯ ದೂರದ ಸಂಬಂಧಿ ರವೀಂದ್ರ ಸಿಂಗ್‌ ಎಂಬಾತ ಪ್ರಕರಣದ ಆರೋಪಿಯಾಗಿದ್ದು, ಈತನ ಬಂಧನಕ್ಕೆ ಸಂತ್ರಸ್ತೆ ಆಗ್ರಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT