ಸಂಸತ್ ಭವನದ ಹೊರಗಡೆ ವರದಿಗಾರರ ಬಳಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಈಗಿನ ಪರಿಸ್ಥಿತಿ ಬಗ್ಗೆ ಸಾಮಾನ್ಯ ಹೇಳಿಕೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಇಂತಹ ಹೊತ್ತಿನಲ್ಲಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಹೇಳಿದ್ದಾರೆ.