ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಶತ್ರುಘ್ನ ಸಿನ್ಹಾ ಮೋದಿ ಸರ್ಕಾರವನ್ನು ಟೀಕಿಸುತ್ತಲೇ ಇದ್ದರು.ರಫೇಲ್ ಪ್ರಕರಣ, ಜಿಎಸ್ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿ ರವಿಶಂಕರ್ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು.