ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಜನ ಅತೃಪ್ತ ಶಾಸಕರ ಅನರ್ಹತೆ ಸಾಧ್ಯವಿಲ್ಲ: ಮುಕುಲ್‌ ರೊಹ್ಟಗಿ

Last Updated 13 ಜುಲೈ 2019, 10:56 IST
ಅಕ್ಷರ ಗಾತ್ರ

ಮುಂಬೈ:ಅನರ್ಹತೆಯ ಭೀತಿಯಲ್ಲಿರುವ 10 ಜನ ಅತೃಪ್ತ ಶಾಸಕರನ್ನು ಅನರ್ಹತೆ ಮಾಡಲು ಸಭಾಧ್ಯಕ್ಷರಿಗೆ ಸಾಧ್ಯವಿಲ್ಲ ಎಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್‌ ರೊಹ್ಟಗಿಅವರಿಗೆಪತ್ರ ಬರೆದಿದ್ದಾರೆ.

ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರಿಗೆ ಪತ್ರ ಬರೆದಿರುವ ಮುಕುಲ್ ರೊಹ್ಟಗಿ ಸಭಾಧ್ಯಕ್ಷರು 10 ಜನ ಅತೃಪ್ತ ಶಾಸಕರನ್ನು ಅನರ್ಹತೆಗೊಳಿಸಲು ಸಾಧ್ಯವಿಲ್ಲ ಎಂದು ಅಭಯ ನೀಡಿರುವುದರಿಂದ ಅತೃಪ್ತ ಶಾಸಕರು ಕೊಂಚ ನಿರಾಳರಾಗಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಜುಲೈ 11ರಂದು ವಿಪ್‌ ಜಾರಿ ಮಾಡಿದ್ದಾರೆ, ಇದಕ್ಕೂ ಮೊದಲೇ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಈ ಶಾಸಕರ ಮೇಲೆ ವಿಪ್ ಜಾರಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಎರಡು ಪಕ್ಷಗಳವಿಪ್‌ ಜಾರಿಗೂ ಮುನ್ನವೇ ಶಾಸಕರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ ರಾಜೀನಾಮೆ ಅಂಗೀಕಾರ ಮಾಡುವುದನ್ನು ಸಭಾಧ್ಯಕ್ಷರು ವಿಳಂಬ ಮಾಡುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್‌ ಗಮನಕ್ಕೂ ತಂದಿರುವುದರಿಂದ ಅನರ್ಹತೆ ಸಾಧ್ಯವಿಲ್ಲ ಮುಕುಲ್‌ ರೊಹ್ಟಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT